ADVERTISEMENT

ನ್ಯಾಮತಿ: ಅಡಿಕೆ ಮರಗಳಿಗೆ ಬೆಂಕಿ– ಅಪಾರ ನಷ್ಟ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 6:48 IST
Last Updated 13 ಜನವರಿ 2026, 6:48 IST
ನ್ಯಾಮತಿ ತಾಲ್ಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ಅಡಿಕೆ ಮರಗಳು ಬೆಂಕಿಯಲ್ಲಿ ಸುಟ್ಟಿರುವುದು
ನ್ಯಾಮತಿ ತಾಲ್ಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ಅಡಿಕೆ ಮರಗಳು ಬೆಂಕಿಯಲ್ಲಿ ಸುಟ್ಟಿರುವುದು   

ನ್ಯಾಮತಿ: ತಾಲ್ಲೂಕಿನ ಮುಸ್ಸೇನಾಳು ಗ್ರಾಮದ ರೈತರಿಗೆ ಸೇರಿದ ಅಡಿಕೆ ಮರಗಳು ಶನಿವಾರ ರಾತ್ರಿ ಆಕಸ್ಮಿಕ ಬೆಂಕಿಗೆ ಸುಟ್ಟು ಕರಕಲಾಗಿವೆ. 

ಗ್ರಾಮದ ರೈತ ಧರ್ಮಿಬಾಯಿ ರಾಮನಾಯ್ಕ ಅವರ 2 ಎಕರೆಯಲ್ಲಿನ ಅಡಿಕೆ ಮರಗಳು ಬೆಂಕಿಗೆ ಸುಟ್ಟಿವೆ. ಡ್ರಿಪ್ ಪೈಪುಗಳು, ಪಿವಿಸಿ ಪೈಪ್‌ಗಳು, ಸ್ಪ್ರಿಂಕ್ಲರ್‌ ಸೇರಿದಂತೆ ಅಂದಾಜು ₹5 ಲಕ್ಷ ಮೌಲ್ಯದ ಸಾಮಗ್ರಿ ಹಾಗೂ 8 ಸಾಗುವಾನಿ ಮರಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. 

ರಾಮನಾಯ್ಕ ಪೀರ‍್ಯಾನಾಯ್ಕ ಅವರ 1 ಎಕರೆ 25 ಗುಂಟೆಯಲ್ಲಿ ಬೆಳೆದಿದ್ದ ಅಡಿಕೆ ಮರಗಳು ಹಾಗೂ ಸಾಮಗ್ರಿ ಸುಟ್ಟಿದ್ದು, ₹ 3 ಲಕ್ಷ ನಷ್ಟ ಸಂಭವಿಸಿದೆ. 

ADVERTISEMENT

ಹಾಲಿಬಾಯಿ ರಾಜೇಶನಾಯ್ಕ ಅವರ ಎರಡೂವರೆ ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಮರಗಳು ಹಾಗೂ ಸಾಮಗ್ರಿ ಸುಟ್ಟಿದ್ದು, ₹ 4.50 ಲಕ್ಷ ನಷ್ಟ ಸಂಭವಿಸಿದೆ. 

ಗೋಪಾಲನಾಯ್ಕ ಶೇಖರನಾಯ್ಕ ಎಂಬುವರ 3 ಎಕರೆಯಲ್ಲಿನ ಅಡಿಕೆ ಮರಗಳು ಸುಟ್ಟಿದ್ದು ₹3 ಲಕ್ಷ ನಷ್ಟವಾಗಿದೆ. 

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಎಚ್.ಮಂಜುನಾಥ ಭೇಟಿ ನೀಡಿದ್ದರು.

ಸ್ಥಳಕ್ಕೆ ಹೊನ್ನಾಳಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.