ನ್ಯಾಮತಿ: ಸಮೀಪದ ಕಂಕನಹಳ್ಳಿ ಗ್ರಾಮದ ರೈತರೊಬ್ಬರ ದುಬಾರಿ ಬೆಲೆಯ ಎತ್ತುಗಳನ್ನು ಶನಿವಾರ ಕಳವು ಮಾಡಲಾಗಿದೆ.
ಗ್ರಾಮದ ರೈತ ನಾಗರಾಜಪ್ಪ ಅವರು ಸುಮಾರು ಒಂದೂವರೆ ಲಕ್ಷ ಬೆಲೆ ಬಾಳುವ ಎರಡು ಹೋರಿಗಳನ್ನು ಶನಿವಾರ ಸಂಜೆ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ, ದುಷ್ಕರ್ಮಿಗಳು ಎತ್ತುಗಳನ್ನು ಕಳವು ಮಾಡಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸರಿಗೆ ದೂರು ನೀಡಿದ್ದು, ಪಿಎಸ್ಐ ಪಿ.ಎಸ್. ರಮೇಶ ತನಿಖೆ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.