ADVERTISEMENT

ಸಂತೇಬೆನ್ನೂರು: ಅಧಿಕಾರಿಗಳ ಬೈಕ್ ರ‍್ಯಾಲಿ, ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2021, 14:03 IST
Last Updated 19 ಡಿಸೆಂಬರ್ 2021, 14:03 IST
ಸಂತೇಬೆನ್ನೂರಿನ ಪುಷ್ಕರಣಿ ಎದುರಿನ ಮುಸಾಫಿರ್ ಖಾನ್ ಕಟ್ಟಡದ ಬಳಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಎಸ್‌ಪಿ ರಿಷ್ಯಂತ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ವಿವಿಧ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿತು
ಸಂತೇಬೆನ್ನೂರಿನ ಪುಷ್ಕರಣಿ ಎದುರಿನ ಮುಸಾಫಿರ್ ಖಾನ್ ಕಟ್ಟಡದ ಬಳಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಎಸ್‌ಪಿ ರಿಷ್ಯಂತ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ವಿವಿಧ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿತು   

ಸಂತೇಬೆನ್ನೂರು:ಬುಲೆಟ್ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ, ಜೀನ್ಸ್ ಟೀಶರ್ಟ್ ಧರಿಸಿ ಪ್ರವಾಸಿಗರಂತೆ ಬಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ನೇತೃತ್ವದ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಭಾನುವಾರ ಇಲ್ಲಿನ ಪುಷ್ಕರಣಿ ಭೇಟಿ ನೀಡಿತು.

ಬೈಕ್ ರ‍್ಯಾಲಿ ಮೂಲಕ ಜಾಗೃತಿ ಜಾತಾ ನಡೆಸಿದ ಅಧಿಕಾರಿಗಳ ತಂಡಎಲ್ಲಾ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿತು. ಹೆಲ್ಮೆಟ್ ಧರಿಸುವುದು, ಕೊರೊನಾ ಲಸಿಕೆ ಹಾಕಿಸುಕೊಳ್ಳುವುದು, ಮಾಸ್ಕ್ ಧರಿಸುವುದು, ಅಪರಾಧ ತಡೆ ಕಾರ್ಯಕ್ರಮ, ಬಾಲ್ಯವಿವಾಹ, ಮಹಿಳಾ ದೌರ್ಜನ್ಯ, ಮಕ್ಕಳ ಮಾರಾಟ ತಡೆ ಬಗ್ಗೆ ಜಾಗೃತಿ ಮೂಡಿಸುವುದು. ಜಿಲ್ಲಾ ಪಂಚಾಯಿತಿಯ ಕಾರ್ಯಕ್ರಮಗಳ ತಿಳಿಸುವ ಉದ್ದೇಶದಿಂದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಎಸ್‌ಪಿ ಸಿ.ಬಿ. ರಿಷ್ಯಂತ್ ಮಾತನಾಡಿ, ‘ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು. ಐಎಸ್‌ಐ ಮಾರ್ಕ್ ಹೆಲ್ಮೆಟ್ ಮಾತ್ರ ಬಳಸಬೇಕು. ಸರಿಯಾದ ಕ್ರಮದಲ್ಲಿ ಧರಿಸಬೇಕು. ಹೆಲ್ಮೆಟ್ ಸರಿಯಾಗಿ ಧರಿಸದ ಕಾರಣ ಈಚೆಗೆ ದಾವಣಗೆರೆಯಲ್ಲಿ ವಿದ್ಯಾರ್ಥಿನಿಯೊಬ್ಬರು ಬೈಕ್ ಅಪಘಾತದಲ್ಲಿ ಮೃತಪಟ್ಟರು. ಹೆಲ್ಮೆಟ್ ಮಾರಾಟ ಮಳಿಗೆಗೆ ಭೇಟಿ ನೀಡಿ ಕಳಪೆ ಹೆಲ್ಮೆಟ್ ಮಾರಾಟ ಮಾಡದಂತೆ ತಿಳಿಸಿದ್ದೇವೆ’ ಎಂದು ಹೇಳಿದರು.

ADVERTISEMENT

ಪುಷ್ಕರಣಿ ಇತಿಹಾಸದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದರು. ಪುಷ್ಕರಣಿ ನಿರ್ಮಾಣ ಕೌಶಲವನ್ನು ಶ್ಲಾಘಿಸಿದರು. ಬಳಿಕ ಸೂಳೆಕೆರೆಗೆ ಪ್ರಯಾಣ ಬೆಳೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.