ADVERTISEMENT

ಫೇಲಾಗಿದ್ದಕ್ಕೆ ಮನನೊಂದು ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 5:59 IST
Last Updated 19 ಆಗಸ್ಟ್ 2020, 5:59 IST

ದಾವಣಗೆರೆ: ಸೆಮಿಸ್ಟರ್ ಪರೀಕ್ಷೆಗಳಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬರು ಮಂಗಳವಾರ ಬೆಳಿಗ್ಗೆ ಟಿ.ವಿ.ಸ್ಟೇಷನ್ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸರಸ್ವತಿ ನಗರದ ನಿವಾಸಿ ರಾಜಪ್ಪ ಅವರ ಪುತ್ರಿ ಸೃಷ್ಟಿ (20) ಆತ್ಮಹತ್ಯೆ ಮಾಡಿಕೊಂಡವರು.

ಬಿಐಇಟಿಯಲ್ಲಿ ಬಿ.ಇ. ವ್ಯಾಸಂಗ ಮಾಡುತ್ತಿದ್ದ ಇವರು ಮೂರು ಹಾಗೂ ನಾಲ್ಕನೇ ಸೆಮಿಸ್ಟರ್‌ಗಳಲ್ಲಿ 9 ವಿಷಯಗಳಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊರಗಡೆ ಹೋಗುತ್ತೇನೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೆಟಿಜೆ ನಗರ ಠಾಣೆಗೆ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.