ದಾವಣಗೆರೆ: ದಾವಣಗೆರೆ ಡಿಸ್ಟ್ರಿಕ್ಸ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಬಾಲಕರ ಸರ್ಕಾರಿ ಕಿರಿಯ ಕಾಲೇಜು ಆವರಣದಲ್ಲಿ ಟೆನಿಸ್ ಪಂದ್ಯಾವಳಿಯನ್ನು ಡಿ. 13 ರಂದು ಬೆಳಗ್ಗೆ 9 ಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಕೆ.ಪಿ. ಚಂದ್ರಪ್ಪ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾಬಸವಂತಪ್ಪ ಪಾಲ್ಗೊಳ್ಳಲಿದ್ದು, ಡಿ. 15ರಂದು ಸಂಜೆ 6ಕ್ಕೆ ಶಾಸಕ ರವೀಂದ್ರನಾಥ್ ಬಹುಮಾನ ವಿತರಣೆ ಮಾಡಲಿದ್ದಾರೆ. ಕಳೆದ ಬಾರಿ ಆಯೋಜಿಸಿದ್ದ ಪಂದ್ಯಾವಳಿಯಲ್ಲಿ 300 ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಬಾರಿಯೂ ಹೆಚ್ಚಿನ ನಿರೀಕ್ಷೆ ಇದೆ. ವಿಜೇತರಿಗೆ ₹1.15 ಲಕ್ಷದವರೆಗೂ ಬಹುಮಾನ ಹಾಗೂ ಆಕರ್ಷಕ ಪಾರಿತೋಷಕ ನೀಡಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಡಾ.ಎಸ್.ಎಂ. ಬ್ಯಾಡಗಿ, ಸಿ.ಎಸ್. ಮೂರ್ತಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.