ADVERTISEMENT

ನಮ್ಮದು ನ್ಯಾಯ ಪರ ನಿಲುವು: ವಚನಾನಂದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 14:40 IST
Last Updated 8 ನವೆಂಬರ್ 2020, 14:40 IST
ವಚನಾನಂದ ಸ್ವಾಮೀಜಿ
ವಚನಾನಂದ ಸ್ವಾಮೀಜಿ   

ಹರಿಹರ:‘ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಯಿಂದ ವಿನಯ ಕುಲಕರ್ಣಿ ಕುಟುಂಬ ಅಘಾತಕ್ಕೊಳಗಾಗಿರುವ ಕಾರಣ ಅವರ ಕುಟುಂಬಕ್ಕೆ ಸ್ವಾಂತನ ಹೇಳಿರುವುದು ನಿಜ. ಆದರೆ, ನಮ್ಮ ನಿಲುವು ನಿರಂತರವಾಗಿ ನ್ಯಾಯದ ಪರವಾಗಿರುತ್ತದೆ’ ಎಂದು ವೀರಶೈವ ಪಂಚಮಸಾಲಿ ಲಿಂಗಾಯತ ಗುರುಪೀಠದ ವಚನಾನಂದ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ವಿನಯ್‌ ಕುಲಕರ್ಣಿ ಮನೆಗೆ ಭೇಟಿ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿನ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ‘ವಿನಯ ಕುಲಕರ್ಣಿ ಅವರು ತಪ್ಪು ಮಾಡಿದ್ದರೇ ಕಾನೂನು ಪ್ರಕ್ರಿಯೆ ನಡೆಯಲಿ. ಆದರೆ, ವಿನಾಕಾರಣ ಅವರನ್ನು ರಾಜಕೀಯ ಪ್ರೇರಿತ ಕಾರಣಗಳಿಂದ ಸಿಲುಕಿಸಿದಲ್ಲಿ ಸಮಾಜ ಸಹಿಸುವುದಿಲ್ಲ. ಸಮಾಜದ ಪ್ರತಿ ಭಕ್ತರ ಪ್ರತಿಯಾಗಿ ಶ್ರೀ ಪೀಠದ ಕಾಳಜಿ ಸದಾ ಏಕರೀತಿಯಾಗಿರುತ್ತದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT