ದಾವಣಗೆರೆ: ಎಲ್ಲ ಸರ್ಕಾರಗಳ ಅವಧಿಯಲ್ಲೂ ಫೋನ್ ಕದ್ದಾಲಿಕೆ ನಡೆದಿದೆ. ಇದರಲ್ಲಿ ಹೊಸತೇನೂ ಇಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫೋನ್ ಕದ್ದಾಲಿಕೆ ಸಂಬಂಧ ಕಾಂಗ್ರೆಸ್, ಜೆಡಿಎಸ್, ಬಿಜೆಪಿಯವರು ಒಂದೊಂದು ರೀತಿ ಹೇಳುತ್ತಿದ್ದಾರೆ. ಅವರವರಿಗೆ ತೋಚಿದಂತೆ ವ್ಯಾಖ್ಯಾನ ಮಾಡುತ್ತಿದ್ದಾರೆ. ಇದರಲ್ಲಿ ಹೊಸದು ಇದೆ ಎಂದೇನೂ ನನಗೆ ಅನಿಸುವುದಿಲ್ಲ. ಅದನ್ನು ಇಲ್ಲಿಗೆ ಬಿಡುವುದು ಒಳಿತು. ಈ ಬಗ್ಗೆ ತನಿಖೆಯೂ ಅಗತ್ಯವಿಲ್ಲ’ ಎಂದು ಅಭಿಪ್ರಾಯಪಟ್ಟರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.