ADVERTISEMENT

ಪೊಲೀಸ್ ಸ್ಟಿಕ್ಕರ್ ಅಂಟಿಸಿದ್ದ ಕಾರು ಅಪಘಾತ: ಒಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 4:32 IST
Last Updated 13 ಏಪ್ರಿಲ್ 2021, 4:32 IST
ಅಪಘಾತವಾದ ಕಾರಿನಲ್ಲಿ ಪೊಲೀಸ್ ಸ್ಟಿಕ್ಕರ್ ಅಂಟಿಸಿರುವುದು
ಅಪಘಾತವಾದ ಕಾರಿನಲ್ಲಿ ಪೊಲೀಸ್ ಸ್ಟಿಕ್ಕರ್ ಅಂಟಿಸಿರುವುದು   

ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಹೊಸ ಕುಂದವಾಡ ಸಮೀಪ ಹೋಟೆಲ್ ಸಮೀಪ ಕಾರು ಹಾಗೂ ದ್ವಿಚಕ್ರ ವಾಹನದ‌ ನಡುವೆ ಅಪಘಾತವಾಗಿದ್ದು, ಸವಾರರೊಬ್ಬರಿಗೆ ಗಾಯಗಳಾಗಿವೆ.

ಹೊಸ ಕುಂದವಾಡ ನಿವಾಸಿ ಎಲ್‌ಐಸಿ ಏಜೆಂಟ್ ರಮೇಶ (55) ಗಾಯಗೊಂಡವರು.

‘ಅಪಘಾತವಾದ ಮೇಲೆ ಕಾರಿನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಅವರು ಓಡಿಹೋಗಿದ್ದಾರೆ. ಸ್ಥಳೀಯರ ನೆರವಿನಿಂದ ಗಾಯಗೊಂಡ ರಮೇಶ ಅವರನ್ನು 112 ತುರ್ತು ಸ್ಪಂದನ ವಾಹನದಲ್ಲಿ ಚಿಕಿತ್ಸೆಗಾಗಿ ಸಿ.ಜಿ. ಆಸ್ಪತ್ರೆಗೆ ಕಳುಹಿಸಲಾಯಿತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.

ADVERTISEMENT

‘ಅಪಘಾತವಾದ ಕಾರಿನಲ್ಲಿ ಪೊಲೀಸ್ ಎಂಬ ಸ್ಟಿಕ್ಕರ್ ಅಂಟಿಸಿದ್ದು, ಪೊಲೀಸರೇ ಅಪಘಾತ ಮಾಡಿದ್ದಾರೆ’ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದರು.

‘ವಾಹನ ಖಾಸಗಿಯದಾಗಿದ್ದು, ಪೊಲೀಸ್ ಸ್ಟಿಕ್ಕರ್ ಅಂಟಿಸಲಾಗಿದೆ. ಸಿಆರ್‌ಪಿಎಫ್‌ನವರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಇದ್ದು, ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.