ದಾವಣಗೆರೆ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಪ್ರತಿಭಟನೆಗೆ ಮುಂದಾದ ಕಮ್ಯುನಿಸ್ಟ್ ಹಾಗೂ ಬೀಡಿ ಕಾರ್ಮಿಕರ ಸಂಘಟನೆ ಸದಸ್ಯರನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದರು.
ಇಲ್ಲಿನ ಜಯದೇವ ಸರ್ಕಲ್ನಲ್ಲಿ ಗುರುವಾರ ಪ್ರತಿಭಟನೆಗೆ ಕಾರ್ಮಿಕರು ಮುಂದಾದಾಗ, ‘ನಗರದಲ್ಲಿ ಡಿ.21ರವರೆಗೆ ನಿಷೇಧಾಜ್ಞೆ ಜಾರಿ ಇದ್ದು, ಪ್ರತಿಭಟನೆ ಮಾಡುವಂತಿಲ್ಲ. ಅಗತ್ಯ ಇದ್ದರೆ ಸಂಘಟನೆ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಿ. ಇದನ್ನು ಮೀರಿ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಕೆ ನೀಡಿದರು.
ಪೊಲೀಸರು ಪ್ರತಿಭಟನಕಾರರನ್ನು ಚದುರಿಸಿದರು. ಬಳಿಕ ಪ್ರತಿಭಟನಕಾರರು ವಾಪಸಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.