ದಾವಣಗೆರೆ: ಪ್ರವಾದಿ ಮಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ‘ಸೈಯದ್ ಷಾ, ಅಬ್ದುಲ್ ಷಾ ಖಾದ್ರಿ’ ದರ್ಗಾ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು.
ಪೈಗಂಬರ್ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಅಶಾಂತಿ ವಾತಾವರಣ ಸೃಷ್ಟಿ ಮಾಡಲಾಗಿದೆ. ಇಂತಹ ಹಲವಾರು ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ ಇಂತಹ ಪ್ರಚೋದನೆ ಹೇಳಿಕೆ ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಹೀಗಾಗಿಯೇ ದೇಶಾದ್ಯಂತ ಪ್ರತಿಭಟನೆಗಳು, ಹೋರಾಟಗಳು ನಡೆಯುತ್ತಿವೆ ಎಂದರು. ಟಾರ್ಗೆಟ್ ಮೊಹಮ್ಮದ್ ಅಸ್ಲಂ, ಸೈಯದ್ ಮೊಹಮ್ಮದ್ ಖಾದ್ರಿ (ಮುನ್ನ) ಯಾಕೂಬ್ ಕೊಟ್ಟೂರು, ಸೈಯದ್ ಜಾಕೀರ್, ಶೇಖ್ ಆಜಂ, ವಾಜೀದ್, ಇಖ್ಬಾಲ್, ಮೊಹಮ್ಮದ್ ಸಮೀರ್, ಮೆಹಬೂಬ್ (ಬೀಡ) ಜಬಿಉಲ್ಲಾ, ಇನಾಯತ್ ಅಲಿ ಖಾನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.