ADVERTISEMENT

ಸುರೆಹೊನ್ನೆ: ಎತ್ತಿನಗಾಡಿಯಲ್ಲಿ ಬಂದ ಸಚಿವ ಆರ್. ಅಶೋಕ್

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 6:17 IST
Last Updated 16 ಅಕ್ಟೋಬರ್ 2021, 6:17 IST
ಎತ್ತಿನ ಗಾಡಿ ಓಡಿಸುತ್ತಿರುವ ಎಂ.ಪಿ.ರೇಣುಕಾಚಾರ್ಯ ಮತ್ತು ಕಂದಾಯ ಸಚಿವ ಆರ್. ಅಶೋಕ್
ಎತ್ತಿನ ಗಾಡಿ ಓಡಿಸುತ್ತಿರುವ ಎಂ.ಪಿ.ರೇಣುಕಾಚಾರ್ಯ ಮತ್ತು ಕಂದಾಯ ಸಚಿವ ಆರ್. ಅಶೋಕ್   

ಸುರೆಹೊನ್ನೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಂದಾಯ ಸಚಿವ ಆರ್. ಅಶೋಕ್ ಅವರು ನ್ಯಾಮತಿ ತಾಲ್ಲೂಕಿನ ಸುರೆಹೊನ್ನೆ ದೇವಸ್ಥಾನದಿಂದ ಸಭಾಂಗಣದವರೆಗೆ ಎತ್ತಿನಗಾಡಿಯಲ್ಲಿ ಬಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎತ್ತಿನಗಾಡಿ ಓಡಿಸಿದರು. ಸಂಸದ ಜಿ.ಎಂ.ಸಿದ್ದೇಶ್ವರ್ ಕೂಡ ಎತ್ತಿನಗಾಡಿಯಲ್ಲಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಹಿತ ಅತಿಥಿಗಳು ಮೆರವಣಿಗೆಯಲ್ಲಿ ನಡೆದುಕೊಂಡು ಬಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.