ADVERTISEMENT

ಪಾಲಿಕೆ ಆಯುಕ್ತರಾಗಿ ರೇಣುಕಾ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2022, 5:13 IST
Last Updated 7 ಡಿಸೆಂಬರ್ 2022, 5:13 IST
ರೇಣುಕಾ
ರೇಣುಕಾ   

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ವಿಶ್ವನಾಥ್‌ ಪಿ. ಮುದಜ್ಜಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಆ ಸ್ಥಾನಕ್ಕೆ ಸ್ಥಳ ಪರಿವೀಕ್ಷಣೆಯಲ್ಲಿದ್ದ ರೇಣುಕಾ ಅವರನ್ನು ನಿಯೋಜಿಸಲಾಗಿದೆ.

ವಿಶ್ವನಾಥ್‌ ಪಿ. ಮುದಜ್ಜಿ ಅವರನ್ನು ನಗರಾಭಿವೃದ್ಧಿ ಇಲಾಖೆಯಡಿ ಬರುವ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರನ್ನಾಗಿ ಮಾಡಲಾಗಿದೆ. ರೇಣುಕಾ ಅವರನ್ನು ಮುಂದಿನ 2 ವರ್ಷಗಳಿಗೆ ಇಲ್ಲವೇ ಮುಂದಿನ ಆದೇಶದವರೆಗೆ ಪಾಲಿಕೆ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT