ADVERTISEMENT

ಭದ್ರಾ ನೀರಲ್ಲಿ ಭತ್ತ ಬೆಳೆಯದಿರಲು ಮನವಿ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 10:15 IST
Last Updated 21 ಆಗಸ್ಟ್ 2019, 10:15 IST
ಹರಪನಹಳ್ಳಿಯಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ಕಪ್ಪುಬ್ಯಾಡ್ಜ್‌ ಧರಿಸಿ ಪ್ರತಿಭಟನೆ ನಡೆಸಿದರು
ಹರಪನಹಳ್ಳಿಯಲ್ಲಿ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಂಗಳವಾರ ಕಪ್ಪುಬ್ಯಾಡ್ಜ್‌ ಧರಿಸಿ ಪ್ರತಿಭಟನೆ ನಡೆಸಿದರು   

ದಾವಣಗೆರೆ: ಭದ್ರಾ ಜಲಾಶಯದಿಂದ ನೀರು ಹರಿಸುತ್ತಿದ್ದು, ಹೆಚ್ಚು ನೀರು ಬೇಡುವ ಭತ್ತವನ್ನು ಬೆಳೆಯದೇ ಪರ್ಯಾಯ ಬೆಳೆ ಬೆಳಯುವಂತೆ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್‌ ತಿಳಿಸಿದ್ದಾರೆ.

ಎಡದಂಡೆ ನಾಲೆ, ಬಲದಂಡೆ ನಾಲೆ, ಆನವೇರಿ, ದಾವಣಗೆರೆ, ಮಲೆಬೆನ್ನೂರು, ಹರಿಹರ ಶಾಖಾ ನಾಲೆಗಳಿಗೆ ಆ.16ರಿಂದ ನೀರು ಹರಿಸಲಾಗುತ್ತಿದೆ. ಅದರಂತೆ ಭದ್ರಾ ಬಲದಂಡೆ ಕಾಲುವೆ ವಿಭಾಗದಡಿ ಬರುವ ಎಲ್ಲ ವಿತರಣಾ ಕಾಲುವೆಗಳಿಗೆ ಆ.23ರಿಂದ ಪ್ರತಿ 10 ದಿನಗಳ ಅವಧಿಯ ಸರದಿಯಲ್ಲಿ ನೀರು ಹರಿಸಲಾಗುತ್ತದೆ.

ಹೆಚ್ಚು ನೀರುಣ್ಣುವ ಭತ್ತ ಇನ್ನಿತರ ಬೆಳೆಗಳನ್ನು ಬೆಳೆಯಬಾರದು. ನೀರಾವರಿ ಕಾಲುವೆ, ಕಟ್ಟಡಗಳನ್ನು ಜಖಂಗೊಳಿಸಬಾರದು. ನಿಯಮಿತ ಪ್ರಮಾಣಕ್ಕಿಂತ ಹೆಚ್ಚು ನೀರು ಬಳಸಬಾರದು. ಅನಧಿಕೃತವಾಗಿ ಪಂಪ್‌ಸೆಟ್‌ ಅಳವಡಿಸಿ ನೀರು ಹಾಯಿಸಬಾರದು ಎಂದು ಅವರು ಪ್ರಕಟಣೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.