ADVERTISEMENT

ದಾವಣಗೆರೆ: ₹1.19 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 6 ಜೂನ್ 2020, 9:22 IST
Last Updated 6 ಜೂನ್ 2020, 9:22 IST
ದಾವಣಗೆರೆಯ ತಾಲೂಕಿನ ಹೆಬ್ಬಾಳು ಟೋಲ್‌ ಬಳಿಯ ಹುಣಸೆಕಟ್ಟೆ ಸಮೀಪ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ. ನರಸಿಂಹ ತಾಮ್ರಧ್ವಜ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಶಪಡಿಸಿಕೊಂಡಿತು.
ದಾವಣಗೆರೆಯ ತಾಲೂಕಿನ ಹೆಬ್ಬಾಳು ಟೋಲ್‌ ಬಳಿಯ ಹುಣಸೆಕಟ್ಟೆ ಸಮೀಪ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ. ನರಸಿಂಹ ತಾಮ್ರಧ್ವಜ ನೇತೃತ್ವದಲ್ಲಿ ಅಧಿಕಾರಿಗಳ ತಂಡ ವಶಪಡಿಸಿಕೊಂಡಿತು.   

ದಾವಣಗೆರೆ: ಬಡವರಿಗೆ ತಲುಪಬೇಕಾಗಿದ್ದ 8 ಟನ್ ಪಡಿತರ ಅಕ್ಕಿ ಹಾಗೂ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯನ್ನು ಗ್ರಾಮಾಂತರ ಡಿವೈಎಸ್ಪಿ ವಿ.ನರಸಿಂಹ ತಾಮ್ರಧ್ವಜ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ತಂಡ ವಶಕ್ಕೆ ಪಡೆದು ಲಾರಿ ಚಾಲಕ ಜಗದೀಶ್‌ನನ್ನು ಬಂಧಿಸಿದೆ.

ತಾಲೂಕಿನ ಹೆಬ್ಬಾಳು ಟೋಲ್‌ ಬಳಿಯ ಹುಣಸೆಕಟ್ಟೆ ಸಮೀಪ ಮಜ್ದಾ ಲಾರಿಯಲ್ಲಿ 1.19 ಲಕ್ಷ ಮೌಲ್ಯದ ಅಕ್ಕಿಯನ್ನು ಲಾರಿಯಲ್ಲಿ ತುಮಕೂರು ಹಾಗೂ ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT