ADVERTISEMENT

ಕೋಟೆ ಆಂಜನೇಯಸ್ವಾಮಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2025, 16:02 IST
Last Updated 12 ಏಪ್ರಿಲ್ 2025, 16:02 IST
ಸಾಸ್ವೆಹಳ್ಳಿ ಕೋಟೆ ಆಂಜನೇಯಸ್ವಾಮಿಯ ರಥೋತ್ಸವದ ಶನಿವಾರ ಸಂಜೆ ಸಹಸ್ರಾರು ಭಕ್ತರ   ಸಮ್ಮುಖದಲ್ಲಿ ಮಳೆಯ ನಡುವೆಯೆ ಅದ್ದೂರಿಯಾಗಿ ನಡೆಯಿತು.
ಸಾಸ್ವೆಹಳ್ಳಿ ಕೋಟೆ ಆಂಜನೇಯಸ್ವಾಮಿಯ ರಥೋತ್ಸವದ ಶನಿವಾರ ಸಂಜೆ ಸಹಸ್ರಾರು ಭಕ್ತರ   ಸಮ್ಮುಖದಲ್ಲಿ ಮಳೆಯ ನಡುವೆಯೆ ಅದ್ದೂರಿಯಾಗಿ ನಡೆಯಿತು.   

ಸಾಸ್ವೆಹಳ್ಳಿ: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ರಥೋತ್ಸವ ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ರಥೋತ್ಸವದ ನಿಮಿತ್ತ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.

ರಥವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಎಡೆ ಬಾನ ಅರ್ಪಿಸಿ, ರಥ ಶಾಂತಿ ಪೂಜೆ ಸಲ್ಲಿಸಲಾಯಿತು.

ADVERTISEMENT

ಭಕ್ತರು ರಥಕ್ಕೆ, ಮೆಣಸು ಮಂಡಕ್ಕಿ, ಬಾಳೆಹಣ್ಣು ತೂರಿ ಭಕ್ತಿ ಸಮರ್ಪಿಸಿದರು. ರಥದಲ್ಲಿ ಕಲ್ಲೇಶ್ವರಸ್ವಾಮಿ, ಚೌಡೇಶ್ವರಿ ದೇವಿ, ನರಸಿಂಹಸ್ವಾಮಿ ಮತ್ತು ಹನುಮಂತದೇವರ ಉತ್ಸವಮೂರ್ತಿ ಪ್ರತಿಷ್ಠಾಪಿಸಲಾಯಿತು.

ರಥೋತ್ಸವಕ್ಕೆ ಜಾನಪದ ಕಲಾ ಮೇಳಗಳು ಮತ್ತು ತಮಟೆ ವಾದ್ಯ ಮೇಳಗಳು ಮೆರುಗು ನೀಡಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.