ADVERTISEMENT

ಪ್ರಚೋದನಕಾರಿ ಭಾಷಣ: ಸತೀಶ್‌ ಪೂಜಾರಿ ಬಂಧನ

ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟಕ್ಕೆ ಪ್ರೇರಣೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 13:34 IST
Last Updated 22 ಸೆಪ್ಟೆಂಬರ್ 2024, 13:34 IST
<div class="paragraphs"><p>ಬಂಧನ </p></div>

ಬಂಧನ

   

(ಸಾಂದರ್ಭಿಕ ಚಿತ್ರ)

ದಾವಣಗೆರೆ: ಕೋಮು ಸಾಮರಸ್ಯ ಹದಗೆಡಿಸುವ ನಿಟ್ಟಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಪ್ರಾಂತ ಸಂಚಾಲಕ ಸತೀಶ್ ಪೂಜಾರಿ ಅವರನ್ನು ಪೊಲೀಸರು ಶನಿವಾರ ತಡರಾತ್ರಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಂಧಿಸಿದ್ದಾರೆ.

ADVERTISEMENT

ದಾವಣಗೆರೆಯ ಬಸವನಗರ ಠಾಣೆ ಪೊಲೀಸರು ಪೂಜಾರಿ ಅವರನ್ನು ತಡರಾತ್ರಿ ನಗರಕ್ಕೆ ಕರೆತಂದು ನ್ಯಾಯಾಧೀಶರೆದುರು ಹಾಜರುಪಡಿಸಿದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಜಿಲ್ಲಾ ಕಾರಾಗೃಹಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗಮಂಗಲ ಗಲಭೆ ಖಂಡಿಸಿ ಸೆ.18ರಂದು ನಗರದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಸತೀಶ್‌ ಪೂಜಾರಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಮರುದಿನ ನಡೆದ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.