ಚನ್ನಗಿರಿ: ತಾಲ್ಲೂಕಿನ ದೊಂದರಘಟ್ಟ ಸಮೀಪ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶಾಲಾ ಬಸ್ ಹರಿದು ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಪದ್ಮದೀಪ ಇಂಟರ್ ನ್ಯಾಷನಲ್ ಶಾಲೆಯ ಯುಕೆಜಿ ವಿದ್ಯಾರ್ಥಿ ಅಜೇಯ (5) ಮೃತಪಟ್ಟ ಬಾಲಕ. ಶಾಲೆಯ ಬಸ್ನಲ್ಲಿ ಸಂಜೆ ವಾಪಸ್ ಸ್ವಗ್ರಾಮ ಕೆ.ಗಾಣದಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಬಾಲಕ ಇಳಿದು ಹೋಗುವ ವೇಳೆ ಬಸ್ನ ಚಕ್ರದಡಿಗೆ ಸಿಲುಕಿ ಮೃತಪಟ್ಟಿದ್ದಾನೆ.ಸುದ್ದಿ ತಿಳಿದ ಗ್ರಾಮಸ್ಥರು ಶಾಲೆಯ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.