
ಪ್ರಜಾವಾಣಿ ವಾರ್ತೆ
ಗೋವಿನಕೋವಿ (ನ್ಯಾಮತಿ): ಗ್ರಾಮದ ಹಾಲಸ್ವಾಮಿ ಮಠದಲ್ಲಿ ಮಾರ್ಚ್ 10ರಂದು ಮಹಾಶಿವರಾತ್ರಿ ಆಚರಣೆ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮಾರ್ಚ್ 10ರ ಸಂಜೆ ಸದ್ಗುರು ಶಿವಯೋಗಿ ವಿಶ್ವರಾಧ್ಯ ಮಹಾಲಿಂಗ ಹಾಲಸ್ವಾಮಿ ನೇತೃತ್ವದಲ್ಲಿ ಹೋಮಪೂಜೆ, ಗುಳ್ಳಮ್ಮದೇವಿ ಮೂರ್ತಿಗೆ ಮಹಾರುದ್ರಾಭಿಷೇಕ, ಮಹಾಮಂಗಳಾರತಿ ನಂತರ ಜಾಗರಣೆ ಕಾರ್ಯಕ್ರಮ ನಡೆಯಲಿದೆ.
ಮಾರ್ಚ್ 11ರ ಮುಂಜಾನೆ ಗ್ರಾಮದಲ್ಲಿ ಶ್ರೀಗಳವರ ಪಲ್ಲಕ್ಕಿ ಉತ್ಸವ ಜರುಗಿದ ನಂತರ ಶ್ರೀಗಳವರು ಕಾರಣೀಕವಾಣಿ ನುಡಿದ ನಂತರ ಸಾಮೂಹಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಹಾಲಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷ ಎಚ್.ಫಾಲಾಕ್ಷಪ್ಪಗೌಡ, ಅಧ್ಯಕ್ಷ ಸಣ್ಣರಮೇಶ ಮತ್ತು ಕಾರ್ಯದರ್ಶಿ ವಿ.ಎಚ್.ರುದ್ರೇಶ, ಎ.ಸತೀಶ, ಜಿ.ವಿ.ರಮೇಶ, ಬಿ.ರಾಜಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.