ADVERTISEMENT

ಕರ್ತವ್ಯಕ್ಕೆ ಅಡ್ಡಿ ಮಾಡಿದರೆ ಗುಂಡಿನ ಮಳೆಗೈಯಬೇಕು: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 20:15 IST
Last Updated 23 ಏಪ್ರಿಲ್ 2020, 20:15 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   

ಹೊನ್ನಾಳಿ: ‘ಪೊಲೀಸರು ಕರ್ತವ್ಯ ನಿರ್ವಹಿಸುವಾಗ ಅಡ್ಡಿಪಡಿಸಿದರೆ, ಅಂಥವರ ಮೇಲೆ ಲಾಠಿ ಪ್ರಹಾರದ ಬದಲು ಗುಂಡಿನ ಮಳೆಗೈಯಬೇಕು’ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ತಾಲ್ಲೂಕಿನ ಪತ್ರಿಕಾ ವಿತರಕರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಿಂಪಿ ಸಮಾಜದ ಟೈಲರ್‌ಗಳಿಗೆ ಗುರುವಾರ ಫುಡ್‌ಕಿಟ್ ವಿತರಿಸಿ ಅವರು ಮಾತನಾಡಿದರು.

ಕರ್ತವ್ಯಕ್ಕೆ ಅಡ್ಡಿಪಡಿಸುವ, ಹಲ್ಲೆ ಮಾಡುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸುವಂತೆ ಮುಖ್ಯಮಂತ್ರಿ ಅವರನ್ನು ಆಗ್ರಹಪಡಿಸಲಾಗುವುದು ಎಂದು ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.