ADVERTISEMENT

ಮೊಂಬತ್ತಿ ಬೆಳಗಿ ಭಾರತೀಯ ಯೋಧರಿಗೆ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 15:15 IST
Last Updated 17 ಜೂನ್ 2020, 15:15 IST
ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿ ಹುತಾತ್ಮರಾದ ವೀರಯೋಧರಿಗೆ ದಾವಣಗೆರೆಯ ರಾಂ&ಕೋ ವೃತ್ತದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸದಸ್ಯರು ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಚೀನಾ ದೇಶದ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು –ಪ್ರಜಾವಾಣಿ ಚಿತ್ರ
ಭಾರತ ಮತ್ತು ಚೀನಾ ಗಡಿಪ್ರದೇಶದಲ್ಲಿ ಹುತಾತ್ಮರಾದ ವೀರಯೋಧರಿಗೆ ದಾವಣಗೆರೆಯ ರಾಂ&ಕೋ ವೃತ್ತದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸದಸ್ಯರು ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಚೀನಾ ದೇಶದ ಅಧ್ಯಕ್ಷರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಲಡಾಖ್ ಗಡಿಯಲ್ಲಿ ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಭಾರತಿಯ ಯೋಧರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಂ ಅಂಡ್ ಕೊ ಸರ್ಕಲ್‌ನಲ್ಲಿ ಕ್ಯಾಂಡಲ್ ಬೆಳಗಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿ, ಚೀನಾ ಅಧ್ಯಕ್ಷರ ಪ್ರತಿಕೃತಿ ಸುಡಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ ‘ದೇಶದ ಭದ್ರತೆ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಚೀನಾಕ್ಕೆ ಸರಿಯಾದ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು.

ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಸವಿತಾ ಹುಲ್ಮನಿ ಗಣೇಶ್ , ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಅನಿತಾ ಬಾಯಿ ಮಾಲತೇಶ್, ತಾ.ಪಂ ಸದಸ್ಯ ಆಶಾ ಮುರಳಿ, ಸಾಮಾಜಿಕ ಜಾಲತಾಣದ ಕೆ. ಎಲ್. ಹರೀಶ್ ಬಸಾಪುರ, ಬಾತಿ ಶಿವಕುಮಾರ್, ದಾವಣಗೆರೆ ಉತ್ತರ ಎಸ್ಸಿ ಘಟಕದ ಅಧ್ಯಕ್ಷ ರಂಗನಾಥಸ್ವಾಮಿ, ಎನ್.ಎಸ್.ಯು.ಐನ ಮುಜಾಹಿದ್, ಮಹಿಳಾ ಕಾಂಗ್ರೆಸ್ ನ ಶುಭಮಂಗಳ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.