ADVERTISEMENT

ಹುತಾತ್ಮ ರೈತರಿಗೆ ಶ್ರದ್ದಾಂಜಲಿ: ಅಪರಾಧಿಗಳಿಗೆ ಶಿಕ್ಷೆ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2021, 3:33 IST
Last Updated 14 ಅಕ್ಟೋಬರ್ 2021, 3:33 IST
ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಹತ್ಯೆ ದಾವಣಗೆರೆ ಜಯದೇವ ಸರ್ಕಲ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸುವ ಮೂಲಕ ಹುತಾತ್ಮ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು
ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಹತ್ಯೆ ದಾವಣಗೆರೆ ಜಯದೇವ ಸರ್ಕಲ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸುವ ಮೂಲಕ ಹುತಾತ್ಮ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು   

ದಾವಣಗೆರೆ: ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ಮಾರಣಹೋಮ ಖಂಡಿಸಿ ಇಲ್ಲಿನ ಜಯದೇವ ಸರ್ಕಲ್‌ನಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಘಟಕದಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟಿಸುವ ಮೂಲಕ ಹುತಾತ್ಮ ರೈತರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಸಮಿತಿಯ ಜಿಲ್ಲಾ ಸಂಚಾಲಕ ಆವರಗೆರೆ ಎಚ್.ಜಿ. ಉಮೆಶ್, ‘ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹಾಯಿಸಿ ಹತ್ಯೆಗೈದ ಅಪರಾಧಿಗಳನ್ನು ಬಂಧಿಸಿ, ಕೊಲೆ ಪ್ರಕರಣದಲ್ಲಿ ಬರುವ ಐಪಿಸಿ ಅಡಿಯಲ್ಲಿ ಉಗ್ರ ಶಿಕ್ಷೆ ಕೊಡಿಸಬೇಕು. ಮೃತರಾದ ರೈತರ ತಲಾ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

ಸರ್ಕಾರಿ ನೌಕರಿಯನ್ನು ಮೃತರ ಅವಲಂಬಿತ ಕುಟುಂಬಗಳಿಗೆ ನೀಡಬೇಕು. ಅಲ್ಲದೇ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರಾ ಈ ಕೂಡಲೇ ರಾಜೀನಾಮೆ ನೀಡಬೇಕು. ರೈತರನ್ನು ವಿನಾಕಾರಣ ಕೊಲೆ ಮಾಡುತ್ತಿರುವ ಬಿಜೆಪಿ ಸರ್ಕಾರ ತೊಲಗಬೇಕು ಎಂದು ಒತ್ತಾಯಿಸಿದರು.

ADVERTISEMENT

ಖುಷಿಗಾಗಿ ಗಾಳಿಯಲ್ಲಿ ಗುಂಡು ಹಾರಿಸುವ ರಾಜ್ಯದ ಕೇಂದ್ರ ಸಚಿವರಿಗೆ ಬಿಜೆಪಿ, ಸಂಘ ಪರಿವಾರ ಬುದ್ಧಿ ಹೇಳಬೇಕು. ಜತೆಗೆ ಸಂಘಪರಿವಾರ, ಬಿಜೆಪಿ ಕೂಡಾ ಅನಾಗರಿಕ ಸಂಸ್ಕೃತಿಯಿಂದ ಹೊರಬರಬೇಕು ಎಂದು ಸಲಹೆ ನೀಡಿದರು.

ಮಧು ತೊಗಲೇರಿ, ಶ್ರೀನಿವಾಸ್, ದೇವರಾಜ್, ರಂಗಪ್ಪ, ಭಾರತಿ, ಐರಣಿ ಚಂದ್ರು, ಮಹಮ್ಮದ್ ಜಿಕ್ರಿಯಾ, ಆದಿಲ್‍ಖಾನ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.