ADVERTISEMENT

ಆಸ್ತಿ ವಿವಾದ: ಮೆಕ್ಕೆಜೋಳ ಬೆಳೆಗೆ ಕ್ರಿಮಿನಾಶಕ ಸಿಂಪಡಣೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2023, 16:25 IST
Last Updated 31 ಜುಲೈ 2023, 16:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನ್ಯಾಮತಿ: ತಾಲ್ಲೂಕಿನ ಯರಗನಾಳು ಗ್ರಾಮದಲ್ಲಿ ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತಕಾರರು ನಡೆದು, ಮೆಕ್ಕೆಜೋಳ ಬೆಳೆಗೆ ಬೆಳೆನಾಶಕ ಸಿಂಪಡಣೆ ಮಾಡಿರುವ ಪ್ರಕರಣ ವರದಿಯಾಗಿದೆ.

ಗ್ರಾಮದ ರತ್ನಮ್ಮ ಅವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ  ತಿಂಗಳ ಹಿಂದೆ ಮೆಕ್ಕೆಜೋಳ ಬಿತ್ತನೆ ಮಾಡಿದ್ರು. ಬೆಳೆ ಚೆನ್ನಾಗಿತ್ತು. ಅವರ ಸಹೋದರ ಶೇಖರಪ್ಪ ಅವರು ಮೆಕ್ಕೆಜೋಳ ಬೆಳೆಗೆ ಕಳೆನಾಶಕ ಸಿಂಪಡಣೆ ಮಾಡಿದ್ದಾರೆ. ಇದರಿಂದ ಆರ್ಥಿಕ ನಷ್ಟ ಉಂಟಾಗಿದೆ ಎಂದು ರತ್ನಮ್ಮ ಅವರು ನ್ಯಾಮತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT