ದಾವಣಗೆರೆ: ತಾಲ್ಲೂಕಿನ ಆನಗೋಡು ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ನೀರು ತುಂಬಿದ್ದ ಗುಂಡಿಯೊಳಗೆ ಆಕಸ್ಮಿಕವಾಗಿ ಬಿದ್ದು, ಸಾವನ್ನಪ್ಪಿದ್ದಾನೆ.
ಎಚ್.ಟಿ.ವೀರೇಶ ಅವರ ಪುತ್ರ ಪೃಥ್ವಿರಾಜ್ ಎಚ್.ವಿ. ಮೃತಪಟ್ಟ ಬಾಲಕ. ಗುರುವಾರ ಸಂಜೆ ಆಟವಾಡಲು ಹೋದ ಬಾಲಕ ಮನೆಗೆ ಬಾರದೇ ಇದ್ದಾಗ ಪೋಷಕರು ಹುಡುಕಾಟ ನಡೆಸಿದಾಗ ವೆಂಕಟೇಶ್ ಎಂಬುವರ ಸೈಟ್ನಲ್ಲಿ ತೆಗೆದಿರುವ ಗುಂಡಿಯೊಳಗೆ ಬಿದ್ದು ಮೃತಪಟ್ಟಿದ್ದಾನೆ.
ಈಜುಗಾರರನ್ನು ಕರೆಸಿ ಹುಡುಕಾಟ ನಡೆಸಿದಾಗ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.