ADVERTISEMENT

ಜಗಳೂರು | ಹೊಂಡದಲ್ಲಿ ಮುಳುಗಿ ವಿದ್ಯಾರ್ಥಿ ಸಾವು

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 6:15 IST
Last Updated 6 ಜನವರಿ 2020, 6:15 IST
ಮೃತ ವಿದ್ಯಾರ್ಥಿ ಪವನ್
ಮೃತ ವಿದ್ಯಾರ್ಥಿ ಪವನ್   

ಜಗಳೂರು (ದಾವಣಗೆರೆ):ಹೊಂಡದಲ್ಲಿ ಮುಳುಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪವನ್ (16) ಹೊಂಡದಲ್ಲಿ ಮುಳುಗಿದ ಸಾವನ್ನಪ್ಪಿದ ವಿದ್ಯಾರ್ಥಿ.

ಚಿಕ್ಕಮ್ಮನಹಟ್ಟಿ ಗ್ರಾಮದ ವಕೀಲ ಸಿ.ಬಸವರಾಜ್ ಅವರ ಪುತ್ರ ಪವನ್, ಪಕ್ಕದ ಕಣಕುಪ್ಪೆ ಗ್ರಾಮದ ಹೊಂಡದಲ್ಲಿ ಕೈಕಾಲು ತೊಳೆಯಲು ಹೋದಾಗ ಮುಳುಗಿದ್ದಾನೆ. ಶವವನ್ನು ಹೊಂಡದಿಂದ ಹೊರ ತೆಗೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT