ಜಗಳೂರು: ಗೃಹಿಣಿಯೊಬ್ಬರು, 11 ತಿಂಗಳ ಮಗುವಿನೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಎಂಜಿನಿಯರ್ ಆಗಿರುವ ಮನೋಜ್ ಕುಮಾರ್ ಅವರ ಪತ್ನಿ ಲಿಖಿತಾ (22) ಆತ್ಮಹತ್ಯೆ ಮಾಡಿಕೊಂಡವರು.ಪತಿಯ ಅನೈತಿಕ ಸಂಬಂಧ ಹಾಗೂ ಕಿರುಕುಳದಿಂದ ಬೇಸತ್ತು ಲಿಖಿತಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
‘ಅಳಿಯ ಮನೋಜ್ ಕುಮಾರ್ ಅನೈತಿಕ ಸಂಬಂಧ ಹೊಂದಿದ್ದ ಕಾರಣ ಮನೆಯಲ್ಲಿ ಕೆಲವು ದಿನಗಳಿಂದ ನಿತ್ಯ ಜಗಳ ನಡೆಯುತ್ತಿತ್ತು. ಮನೋಜ್ ಕುಮಾರ್ ಅವರ ತಂದೆ ದೇವೇಂದ್ರಪ್ಪ ಹಾಗೂ ತಾಯಿ ಲೀಲಾವತಿ ಸೇರಿದಂತೆ ಕುಟುಂಬದವರು ಪುತ್ರಿಗೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದರು’ ಎಂದು ಮೃತ ಲಿಖಿತಾ ಅವರ ತಂದೆ, ತಾಯಿ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.