ADVERTISEMENT

ಪ್ರೇಮ ವಿಚಾರ: ಒಂದೇ ಕುಟುಂಬದ ನಾಲ್ವರು ವಿಷ ಸೇವನೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 14:25 IST
Last Updated 9 ಸೆಪ್ಟೆಂಬರ್ 2019, 14:25 IST

ಉಚ್ಚಂಗಿದುರ್ಗ: ಇಲ್ಲಿಗೆ ಸಮೀಪದ ಗೊಲ್ಲರಹಳ್ಳಿ ಗ್ರಾಮದಲ್ಲಿ ಸೋಮವಾರ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಅಣಜಿಗೆರೆ ಗ್ರಾಮದ ಹನುಮಂತಪ್ಪ ಹಾಗೂ ಹನುಮಕ್ಕ ದಂಪತಿಯ ಮಗ ರಂಗನಾಥ ಅದೇ ಗ್ರಾಮದ ಅಂಜಿನಪ್ಪ ಎಂಬುವವರ ಮಗಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಯುವತಿಯ ತಂದೆಯು ರಂಗನಾಥ ಅವರ ಪೋಷಕರಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ರಂಗನಾಥ (22), ಆತನ ಹೆತ್ತವರಾದ ಹನುಮಂತಪ್ಪ (53), ಹನುಮಕ್ಕ(46), ಸಹೋದರ ಮಲ್ಲಿಕಾರ್ಜುನ್ (24) ಗೊಲ್ಲರಹಳ್ಳಿಯಲ್ಲಿ ವಿಷ ಸೇವಿಸಿದ್ದಾರೆ. ಅಸ್ವಸ್ಥರಾದ ಅವರನ್ನು ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.