ದಾವಣಗೆರೆ: ‘ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವ ಹಿಂದೆ ರಾಜಕೀಯ ದುರುದ್ದೇಶ ಇದ್ದರೆ ಅದನ್ನು ಪಂಚಮಸಾಲಿ ಸಮಾಜ ಖಂಡಿಸುತ್ತದೆ’ ಎಂದುಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಎಚ್ಚರಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಅವರು, ‘ಪ್ರಕರಣದಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು. ಆದರೆ, ನ್ಯಾಯ ಕೊಡಿಸುವ ಹಾದಿಯಲ್ಲಿ ಯಾರಿಗೂ ಅನ್ಯಾಯವಾಗಬಾರದು. ಪ್ರಕರಣದಲ್ಲಿ ಯಾರನ್ನು ಬೇಕಾದರೂ ಸಿಬಿಐ ವಿಚಾರಣೆ ನಡೆಸಲಿ. ಆದರೆ, ಅದರಲ್ಲಿ ರಾಜಕೀಯ ದುರುದ್ದೇಶ ಇರಬಾರದು. ಪಂಚಮಸಾಲಿ ಸಮುದಾಯ ಸದಾ ಸತ್ಯ ಮತ್ತು ನ್ಯಾಯದ ಪರವಾಗಿದೆ’ ಎಂದು ಸ್ವಾಮೀಜಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.