ADVERTISEMENT

ನ್ಯಾಮತಿ | ದೇವಸ್ಥಾನದಲ್ಲೇ ಹೃದಯಾಘಾತ: ಅರ್ಚಕ ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 6:23 IST
Last Updated 4 ಸೆಪ್ಟೆಂಬರ್ 2025, 6:23 IST
   

ಗೋವಿನಕೋವಿ (ನ್ಯಾಮತಿ): ಗ್ರಾಮದ ನರಸಿಂಹಸ್ವಾಮಿ ದೇವಸ್ಥಾನದ ಅರ್ಚಕ ಕೃಷ್ಣಪ್ಪ ಉದ್ದೆ ಕಣ್ಣೆರಾ (66) ಅವರು ಮಂಗಳವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ದೇವಸ್ಥಾನದಲ್ಲಿ ಇದ್ದಾಗಲೇ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆಯೇ ಮೃತಪಟ್ಟರು. ಇವರಿಗೆ ಪತ್ನಿ, ಪುತ್ರ, ನಾಲ್ವರು ಪುತ್ರಿಯರು ಇದ್ದಾರೆ. ಸ್ವಗ್ರಾಮದ ರುದ್ರಭೂಮಿ ಯಲ್ಲಿ ಅಂತ್ಯಕ್ರಿಯೆ ನಡೆಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT