ADVERTISEMENT

ಸದಾಶಿವ ವರದಿ ಜಾರಿಯಾಗುವವರೆಗೆ ಹೋರಾಟ ನಿಲ್ಲದು: ಷಡಕ್ಷರಮುನಿ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2021, 5:37 IST
Last Updated 8 ಮಾರ್ಚ್ 2021, 5:37 IST
ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗಾಗಿ ಆಗ್ರಹಿಸಿ ಪಾದಯಾತ್ರೆ ಸಂಬಂಧ ‌ನಡೆದ ಪೂರ್ವಭಾವಿ ಸಭೆಯಲ್ಲಿ ಆದಿಜಾಂಬವ ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು.
ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗಾಗಿ ಆಗ್ರಹಿಸಿ ಪಾದಯಾತ್ರೆ ಸಂಬಂಧ ‌ನಡೆದ ಪೂರ್ವಭಾವಿ ಸಭೆಯಲ್ಲಿ ಆದಿಜಾಂಬವ ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು.   

ದಾವಣಗೆರೆ: ‘ಸದಾಶಿವ ಆಯೋಗ ವರದಿ ಜಾರಿಗಾಗಿ ಆಗ್ರಹಿಸಿ ಉದ್ದೇಶಿತ ಪಾದಯಾತ್ರೆಯನ್ನು ಸ್ವಲ್ಪ ದಿನಗಳ ಮಟ್ಟಿಗೆ ಮುಂದೂಡಲಾಗುವುದು. ಆದರೆ, ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ’ ಎಂದು ಆದಿಜಾಂಬವ ಪೀಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಪಾದಯಾತ್ರೆ ಸಂಬಂಧ ಚರ್ಚಿಸಲು ಇಲ್ಲಿನ ಎಸ್‌.ಜೆ.ಎಂ. ನಗರದ ಬಾಬೂ ಜಗಜೀವನರಾಂ ಸಮುದಾಯ ಭವನ
ದಲ್ಲಿಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮುಖಂಡರು ‘ಸಿದ್ಧತೆಗೆ ಕಾಲಾವಕಾಶ ಕಡಿಮೆ ಇದೆ. ಹಿರಿಯ ರಾಜಕಾರಣಿಗಳನ್ನು ಒಗ್ಗೂಡಿಸಿಕೊಳ್ಳಬೇಕಿದೆ’ ಎಂಬ ಅಭಿಪ್ರಾಯ ಹೇಳಿದಾಗ ಸ್ವಾಮೀಜಿ ಸಹಮತಿಸಿದರು.

‘ರಾಜ್ಯದಲ್ಲಿ ಮತ್ತೊಂದು ಸುತ್ತು ಪ್ರವಾಸ ಕೈಗೊಂಡು ಹಿರಿಯ ರಾಜಕಾರಣಿಗಳು, ಜನಪ್ರತಿನಿಧಿಗಳು, ನೌಕರರು, ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿ ಅಂತಿಮ ದಿನಾಂಕ ನಿರ್ಧರಿಸಲಾಗುವುದು’ ಎಂದರು.

ADVERTISEMENT

‘ಪಾದಯಾತ್ರೆಗೆ ಸಮುದಾಯದ ಎಲ್ಲ ಮಠಾಧೀಶರ ಬೆಂಬಲವಿದೆ. ಮಾದಾರ ಚನ್ನಯ್ಯ ಸ್ವಾಮೀಜಿಗಳೇ ಹೋರಾಟಕ್ಕೆ ಪ್ರೇರಣೆ. ಈ ಬಗ್ಗೆ ಭಕ್ತರಲ್ಲಿ ಗೊಂದಲ ಬೇಡ. ಮುಖಂಡರು ಜಿಲ್ಲಾವಾರು ಸಮಿತಿ ರಚಿಸಿ ಹೋರಾಟದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದರು.

ಶಾಸಕ ಪ್ರೊ.ಎನ್‌.ಲಿಂಗಣ್ಣ, ‘ನಾನು ಮಾದಿಗ ಸಮಾಜದವನಾಗಿದ್ದು, ಪಾದಯಾತ್ರೆಯಲ್ಲಿ ಭಾಗಿಯಾಗುತ್ತೇನೆ. ಅಗತ್ಯ ಧನಸಹಾಯ ನೀಡುತ್ತೇನೆ’ ಎಂದು ಹೇಳಿದರು.

ಹಾವೇರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪರಮೇಶ್ವರಪ್ಪ ಮೇಲ್ಮನೆ, ಎಂ. ಹಾಲೇಶ್ ಆಕ್ಷೇಪಿಸಿದರು.ಆಲೂರು ನಿಂಗರಾಜ್, ಎಚ್.ಸಿ. ಗುಡ್ಡಪ್ಪ, ಡಿ. ದುರುಗೇಶ್, ಎಸ್.ಮಲ್ಲಿಕಾರ್ಜುನ್, ಕುಂದವಾಡ ಮಂಜುನಾಥ್, ಕೆಟಿಜೆ ನಗರ ರವಿ, ಸೋಮ್ಲಾಪುರ ಹನುಮಂತಪ್ಪ, ಡಿ. ದುಗ್ಗಪ್ಪ, ನಾಗರಾಜ್, ಈಶ್ವರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.