ದಾವಣಗೆರೆ:‘ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬರುವುದಿಲ್ಲ. ಉಪಚುನಾವಣೆ ನಡೆಯುವ15 ಕ್ಷೇತ್ರಗಳಲ್ಲೂ ಬಿಜೆಪಿ ಜಯ ಗಳಿಸಲಿದೆ’ ಎಂದು ಸಚಿವ ಶ್ರೀ ರಾಮುಲು ಹೇಳಿದರು.
ರಾಣೆಬೆನ್ನೂರು ಚುನಾವಣಾ ಪ್ರಚಾರಕ್ಕೆ ಹೋಗುವ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಚ್. ಡಿ.ದೇವೇಗೌಡ, ಕುಮಾರಸ್ವಾಮಿ ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಮ್ಮೆ ಸರ್ಕಾರ ಉಳಿಯುತ್ತದೆ ಎನ್ನುತ್ತಾರೆ. ಇನ್ನೊಮ್ಮೆ ಇಲ್ಲ’ ಎನ್ನುತ್ತಾರೆ.
‘ರಾಜ್ಯ ಮತ್ತುಕೇಂದ್ರದಲ್ಲಿ ಬಿಜೆಪಿ ಪರ ಅಲೆ ಇದೆ. ಕಾಂಗ್ರೆಸ್, ಜೆಡಿಎಸ್ ಧೂಳಿಪಟ ಆಗಲಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ದೇಶದಲ್ಲಿ ಹೆಮ್ಮರವಾಗಿ ಬೆಳೆಯಲಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.