ADVERTISEMENT

ದಾವಣಗೆರೆ: ಮೂವರು ಅಂತರರಾಜ್ಯ ಕಳ್ಳರ ಬಂಧನ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 4:46 IST
Last Updated 22 ಜುಲೈ 2022, 4:46 IST

ದಾವಣಗೆರೆ: ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ಇಲ್ಲಿನ ವಿದ್ಯಾನಗರ ಪೊಲೀಸರು, ಆರೋಪಿಗಳಿಂದ ₹ 5.71 ಲಕ್ಷ ಮೌಲ್ಯದ 108 ಗ್ರಾಂ ಬಂಗಾರದ ಗಟ್ಟಿ ಮತ್ತು 1,100 ಗ್ರಾಂ ಬೆಳ್ಳಿಯ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶೌಕತ್‌, ಅಲ್ತಾಫ್‌ ಹಾಗೂ ಮುದಾಸಿರ್‌ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಶಿವಮೊಗ್ಗ, ದಾವಣಗೆರೆ, ರಾಣೆಬೆನ್ನೂರು, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಕಳವು ಪ್ರಕರಣ ದಾಖಲಾಗಿತ್ತು.

2021ರ ಆಗಸ್ಟ್‌ 18ರಂದು ವಿದ್ಯಾನಗರ ಪೊಲೀಸ್‌ ಠಾಣೆ ವ್ಯಾಪ್ತಿಯಜಗನ್ನಾಥ ಎಚ್.ಕೆ. ಅವರ ಮನೆಯ ಬಾಗಿಲನ್ನು ಮುರಿದ ಕಳ್ಳರು, 258 ಗ್ರಾಂ ಬಂಗಾರ ಆಭರಣಗಳು, 650 ಗ್ರಾಂ ಬೆಳ್ಳಿಯ ಸಾಮಗ್ರಿಗಳು ಹಾಗೂ ₹ 72,000ನಗದು ಕಳವು ಮಾಡಿದ್ದರು. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ಪೊಲೀಸರ ತಂಡ ರಚಿಸಲಾಗಿತ್ತು.

ADVERTISEMENT

ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದು, ವಿವಿಧ ಜಿಲ್ಲೆಗಳಲ್ಲಿ6 ಪ್ರಕರಣಗಳಲ್ಲಿ ಭಾಗಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ.
2 ಪ್ರಕರಣಗಳಲ್ಲಿ ಕಳುವಾದ ಒಟ್ಟು ₹ 5.71 ಲಕ್ಷ ಮೌಲ್ಯದ 108ಗ್ರಾಂ ಬಂಗಾರದ ಗಟ್ಟಿ ಮತ್ತು 1,100 ಗ್ರಾಂ ಬೆಳ್ಳಿಯ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದು, 4 ಪ್ರಕರಣಗಳಲ್ಲಿ ವಸ್ತು ಪತ್ತೆಯಾಗಬೇಕಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿತರ ಪತ್ತೆಗೆಡಿವೈಎಸ್‍ಪಿ ನರಸಿಂಹ ವಿ. ತಾಮ್ರಧ್ವಜ, ಸಿಪಿಐ ಎಚ್.ಗುರುಬಸವರಾಜ್ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಕಾಂತರಾಜ್ ಎಸ್.,ರೇಣುಕಾ ಜಿ.ಎಂ., ಎಎಸ್ಐಕೆ.ಎಲ್. ತಿಪ್ಪೇಸ್ವಾಮಿ, ಸಿಬ್ಬಂದಿ ಆನಂದ ಎಂ. ಮುಂದಲಮನಿ, ಮಂಜಪ್ಪ,ಯೋಗೀಶ್ ನಾಯ್ಕ, ಭೋಜಪ್ಪ, ಮಂಜುನಾಥ, ತಿಮ್ಮಣ್ಣ, ರಾಘವೇಂದ್ರ,ಬಸವರಾಜ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.