ನ್ಯಾಮತಿ: ಪಟ್ಟಣದ ಹೊರವಲಯದ ಕುಮಟಾ-ಕಾರಮಡಗಿ ಹೆದ್ದಾರಿಯ ದಾನಿಹಳ್ಳಿ-ನ್ಯಾಮತಿ ಸಮೀಪದಸೇತುವೆ ಬಳಿ ಗುರುವಾರ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕೊಳ್ಳೆಗಾಲದ ಚಾಲಕ ರಮೇಶ (43) ಮೃತಪಟ್ಟವರು. ಮಂಗಳೂರಿನಿಂದ ಕೊಪ್ಪಳಕ್ಕೆ ಕೊಕ್ ತುಂಬಿಕೊಂಡು ಹೊರಟಿದ್ದ ಲಾರಿ ಹೊನ್ನಾಳಿಯಿಂದ ಶಿವಮೊಗ್ಗದತ್ತ ಹೋಗುತ್ತಿದ್ದ ಕೊಳವೆಬಾವಿಯ ಸಾಮಗ್ರಿ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೊಕ್ ತುಂಬಿದ್ದ ಲಾರಿಯ ಚಾಲಕನ ದೇಹ ಎರಡು ಲಾರಿಗಳ ಮಧ್ಯೆ ಸಿಲುಕಿತ್ತು.
ಅಪಘಾತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನ್ಯಾಮತಿ ಪಿಎಸ್ಐಪಿ.ಎಸ್.ರಮೇಶ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.