ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ದಾವಣಗೆರೆಯಲ್ಲಿ ಮೂರು ಕಡೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿತ್ತು. ಅದಕ್ಕಾಗಿ ಎಲ್ಲ ಸಿದ್ಧತೆಗಳು ನಡೆದಿದ್ದವು. ಇದೀಗ ಎಲ್ಲ ಕಾರ್ಯಕ್ರಮಗಳನ್ನು ಜಿಎಂಐಟಿ ಆವರಣದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ.
ಮಧ್ಯಾಹ್ನ ಜಿಎಂಐಟಿ ಹೆಲಿಪ್ಯಾಡ್ಗೆ ಬಂದು ನಗರದ ರಾಮನಗರಕ್ಕೆ ತೆರಳಿ ಗಾಂಧಿಭವನವನ್ನು ಉದ್ಘಾಟಿಸಬೇಕಿತ್ತು. ಅಲ್ಲಿಂದ ಕೊಂಡಜ್ಜಿ ಬಸಪ್ಪ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಬೇಕಿತ್ತು. ಬಳಿಕ ಪೊಲೀಸ್ ಪಬ್ಲಿಕ್ ವಸತಿ ಶಾಲೆ ಉದ್ಘಾಟಿಸಬೇಕಿತ್ತು. ಅಲ್ಲಿಂದ ವಾಪಸ್ಸಾದ ಬಳಿಕ ಜಿಎಂಐಟಿಯಲ್ಲಿ ಕೇಂದ್ರ ಗ್ರಂಥಾಲಯ ಉದ್ಘಾಟಿಸಬೇಕಿತ್ತು.
ರಾಮನಗರ, ಕೊಂಡಜ್ಜಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಜಿಎಂಐಟಿ ಆವರಣದಿಂದಲೇ ಅವುಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಬದಲಾವಣೆಗೆ ಭದ್ರತೆಯ ಕಾರಣ ನೀಡಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ದಾವಣಗೆರೆಯ ಜಿಎಂಐಟಿ ಕ್ಯಾಂಪಸ್ ನಲ್ಲಿ ವೇದಿಕೆ ಸಿದ್ದಗೊಳಿಸಿರುವುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.