ದಾವಣಗೆರೆ: ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಮಂಗಳವಾರ ದಕ್ಷಿಣ ಸಂಚಾರ ಪೊಲೀಸರು ದಿಢೀರ್ ಕಾರ್ಯಾಚರಣೆ ಮಾಡಿದ್ದು, 40 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಟ್ಯೂಷನ್ಗೆ ಹೋಗುವ ಮಕ್ಕಳು ಒಳಗೊಂಡಂತೆ 18 ವರ್ಷದೊಳಗಿನವರು ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪಿಎಸ್ಐ ಶಿವರುದ್ರಪ್ಪ ಎಸ್. ಮೇಟಿ ನೇತೃತ್ವದಲ್ಲಿ ರೆಡ್ಡಿ ಬೀಲ್ಡಿಂಗ್ ಕ್ರಾಸ್, ಸರ್.ಎಂ.ವಿ. ಕಾಲೇಜ್ ಕ್ರಾಸ್, ವಿದ್ಯಾನಗರ ಕಾಫಿ ಡೇ ಕ್ರಾಸ್ ಹಾಗೂ ಪ್ರಮುಖ ಸ್ಥಳಗಳಲ್ಲಿ ವಾಹನ ತಪಾಸಣೆ ನಡೆಸಲಾಯಿತು.
ಅಪ್ರಾಪ್ತ ಮಕ್ಕಳಿಗೆ ದಂಡ ವಿಧಿಸಿದ್ದಲ್ಲದೆ ಹೆತ್ತವರನ್ನು ಕರೆಸಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಮಕ್ಕಳು ವಾಹನ ಚಲಾಯಿಸಿದರೆ ಆಗುವ ಅನಾಹುತಗಳ ಬಗ್ಗೆ ಬುದ್ಧಿ ಮಾತು ಹೇಳಿ ಕಳುಹಿಸಲಾಯಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.