ADVERTISEMENT

ಪಾಲಿಕೆಯಿಂದ ಜಿಲ್ಲಾ ಆಸ್ಪತ್ರೆಗೆ ವಾಟರ್ ಡಿಸ್ಪೆನ್ಸರ್ ಕೊಡುಗೆ

​ಪ್ರಜಾವಾಣಿ ವಾರ್ತೆ
Published 13 ಮೇ 2021, 9:06 IST
Last Updated 13 ಮೇ 2021, 9:06 IST
ರೋಗಿಗಳ ಅನುಕೂಲಕ್ಕಾಗಿ ಮಹಾನಗರ ಪಾಲಿಕೆಯಿಂದ ಕೊಡುಗೆ ನೀಡಿದ ಕುಡಿಯುವ ನೀರಿನ ಡಿಸ್ಪೆನ್ಸ್‌ರ್‌ಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮೇಯರ್ ಎಸ್.ಟಿ. ವೀರೇಶ್ ಅವರು ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು
ರೋಗಿಗಳ ಅನುಕೂಲಕ್ಕಾಗಿ ಮಹಾನಗರ ಪಾಲಿಕೆಯಿಂದ ಕೊಡುಗೆ ನೀಡಿದ ಕುಡಿಯುವ ನೀರಿನ ಡಿಸ್ಪೆನ್ಸ್‌ರ್‌ಗಳನ್ನು ಸಂಸದ ಜಿ.ಎಂ. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಮೇಯರ್ ಎಸ್.ಟಿ. ವೀರೇಶ್ ಅವರು ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು   

ದಾವಣಗೆರೆ: ಇಲ್ಲಿನ ಮಹಾನಗರ ಪಾಲಿಕೆಯಿಂದ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಬಿಸಿ ಮತ್ತು ತಂ‍ಪು ನೀರು ವಿತರಕ ಯಂತ್ರಗಳನ್ನು ಜಿಲ್ಲಾ ಆಸ್ಪತ್ರೆಗೆ ನೀಡಲಾಯಿತು.

ಸಂಸದ ಜಿ.ಎಂ.ಸಿದ್ದೇಶ್ವರ, ಮೇಯರ್‌ ಎಸ್‌.ಟಿ. ವೀರೇಶ್‌ ಅವರು ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಹಸ್ತಾಂತರಿಸಿದರು.

ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಇರುವುದರಿಂದ ಆಮ್ಲಜನಕ ಕಾನ್ಸನ್‍ಟ್ರೇಟರ್ ಖರೀದಿಸಲು ಪಾಲಿಕೆಯಿಂದ ₹ 50 ಲಕ್ಷ ಪಡೆಯಲಾಗಿದೆ. ದಾನಿಗಳು ಸಹಾಯಹಸ್ತ ನೀಡಲು ಮುಂದೆ ಬಂದರೆ ಮತ್ತಷ್ಟು ಆಮ್ಲಜನಕ ಕಾನ್ಸನ್‍ಟ್ರೇಟರ್‌ಗಳನ್ನು ಖರೀದಿಸಲಾಗುವುದು ಎಂದು ಸಂಸದರು ತಿಳಿಸಿದರು.

ADVERTISEMENT

ಆಸ್ಪತ್ರೆಯ ವೈದ್ಯರು, ಸಿಬ್ಬಂದಿಯ ಸಲಹೆ ಮೇರೆಗೆ ಹಾಗೂ ರೋಗಿಗಳಿಗೆ ಅನುಕೂಲಕ್ಕಾಗಿ ತಲಾ ₹ 9 ಸಾವಿರ ಮೌಲ್ಯದ 22 ನೀರಿನ ವಿತರಕ ಯಂತ್ರ ನೀಡಲಾಗಿದೆ ಎಂದು ಮೇಯರ್‌ ತಿಳಿಸಿದರು.

ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ ನಾಯಕ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾ ಆಸ್ಪತ್ರೆ ಸರ್ಜನ್‌ ಡಾ.ಜಯಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.