ADVERTISEMENT

ಮೊಬೈಲ್‌ ವಿಷಯಕ್ಕೆ ಜಗಳ: ಮಹಿಳೆ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 10:15 IST
Last Updated 14 ಡಿಸೆಂಬರ್ 2019, 10:15 IST

ದಾವಣಗೆರೆ: ನಗರದ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಕುಲಸಚಿವ ರಂಗಸ್ವಾಮಿ ಅವರ ಪತ್ನಿ ಲತಾ (48) ಅವರು ಮೊಬೈಲ್‌ ಬಳಕೆ ವಿಚಾರಕ್ಕೆ ನಗರದ ಚಿಕ್ಕಮಣ್ಣಿ ದೇವರಾಜ್‌ ಅರಸು ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲತಾ ಅವರು ಮೊಬೈಲ್‌ ಅನ್ನು ಹೆಚ್ಚು ಬಳಸುತ್ತಿದ್ದರು. ಇದೇ ವಿಷಯಕ್ಕೆ ಪತಿ ಜೊತೆ ಜಗಳವಾಡಿದ್ದರು. ಜಗಳ ವಿಕೋಪಕ್ಕೆ ತಿರುಗಿದ್ದರಿಂದ ಮನನೊಂದು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.