ADVERTISEMENT

ದಾವಣಗೆರೆ: ಮುಂಬೈ ಯುವತಿಯರ ಜೊತೆ ಯುವಕರ ಜಗಳ: ಬಂಧನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 7:38 IST
Last Updated 25 ಜನವರಿ 2023, 7:38 IST

ದಾವಣಗೆರೆ: ಹಣಕಾಸಿನ ವಿಚಾರದಲ್ಲಿ ಮುಂಬೈಯ ಯುವತಿಯರು ಮತ್ತು ಶಿಕಾರಿಪುರದ ಯುವಕರ ನಡುವೆ ಜಗಳ ಉಂಟಾಗಿದ್ದು, ಬಿಡಿಸಲು ಹೋದ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ ಒಬ್ಬರಿಗೂ ಗಾಯಗಳಾಗಿವೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮಂಜುನಾಥ ಮತ್ತು ಹರ್ಷ ಎಂಬಿಬ್ಬರು ಮುಂಬೈನ ಇಬ್ಬರು ಯುವತಿಯರನ್ನು ಇವೆಂಟ್‌ ಮ್ಯಾನೇಜ್‌ಮೆಂಟ್‌ ಎಂದು ಕರೆಸಿ ದಾವಣಗೆರೆಗೆ ಕರೆದುಕೊಂಡು ಬಂದಿದ್ದರು. ಯುವತಿಯರಿಗೆ ನೀಡಬೇಕಾದ ಹಣವನ್ನು ಕೊಡದೇ ಇದ್ದಿದ್ದರಿಂದ ಅವರ ನಡುವೆ ಜಗಳ ಉಂಟಾಗಿದೆ. ಈ ಬಗ್ಗೆ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಕುಡಿತದ ಮತ್ತಿನಲ್ಲಿದ್ದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ
ನಡೆಸಿದ್ದರು.

ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.