ದಾವಣಗೆರೆ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ದೀಪಾ ಜಗದೀಶ್ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷರಾಗಿರುವ ಸಾಕಮ್ಮ ಬಿ.ಎಸ್. ಗಂಗಾಧರ ನಾಯ್ಕ್ ಪ್ರಭಾರ ಅಧ್ಯಕ್ಷರಾಗಿದ್ದಾರೆ.
ದೀಪಾ ಅವರನ್ನು ಅಧ್ಯಕ್ಷರನ್ನಾಗಿ ಜೂನ್ 11ಕ್ಕೆ ಆಯ್ಕೆ ಮಾಡಲಾಗಿತ್ತು. ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿ ನ.23ರಂದು ರಾಜೀನಾಮೆ ಸಲ್ಲಿಸಿದ್ದರು. ಡಿ.7ರವರೆಗೆ ಅವರು ರಾಜೀನಾಮೆ ಹಿಂಪಡೆಯದ ಕಾರಣ ಡಿ. 8ರಂದು ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಮುಂದಿನ ಅಧ್ಯಕ್ಷರ ಆಯ್ಕೆ ಆಗುವವರೆಗೆ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ಅವರು ಉಪಾಧ್ಯಕ್ಷರನ್ನು ಕೋರಿದ್ದಾರೆ.
ಸ್ವಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಕಾರಣವನ್ನು ತಿಳಿಸಿದ್ದರೂ ಬಿಜೆಪಿ ಒಳಗೆ ಮೊದಲೇ ಆಗಿರುವ ತೀರ್ಮಾನದಂತೆ ರಾಜೀನಾಮೆ ನೀಡಿದ್ದಾರೆ. ನಾಲ್ಕು ತಿಂಗಳ ಮಟ್ಟಿಗೆ ಮಾತ್ರ ಅವರಿಗೆ ಅಧ್ಯಕ್ಷತೆಯ ಅವಕಾಶ ನೀಡಲಾಗಿತ್ತು. ಹಾಗಾಗಿ ಅಕ್ಟೋಬರ್ 11ರ ಒಳಗೆ ರಾಜೀನಾಮೆ ಸಲ್ಲಿಸಬೇಕಿತ್ತು. ಕೊರೊನಾ ಕಾರಣದಿಂದ ಹೆಚ್ಚುವರಿಯಾಗಿ ಸುಮಾರು ಎರಡು ತಿಂಗಳು ಅವಕಾಶ ದೊರೆತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.