ADVERTISEMENT

ಅಕ್ರಮ ಪಡಿತರ ದಾಸ್ತಾನು: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಮೇ 2014, 5:39 IST
Last Updated 5 ಮೇ 2014, 5:39 IST
ಹುಬ್ಬಳ್ಳಿಯ ಬಂಕಾಪುರ ಚೌಕದ ಗೋಡೌನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ರವೀಂದ್ರಪ್ರಸಾದ್ ಪರಿಶೀಲಿಸಿದರು. ಎಸಿಪಿ ಎನ್‌.ಡಿ.ಬಿರ್ಜೆ, ಡಿಸಿಪಿ ಸುಭಾಷ್ ಗುಡಿಮನಿ, ಆಹಾಯ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ ವಾಲಗದ ಚಿತ್ರದಲ್ಲಿದ್ದಾರೆ
ಹುಬ್ಬಳ್ಳಿಯ ಬಂಕಾಪುರ ಚೌಕದ ಗೋಡೌನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತ ರವೀಂದ್ರಪ್ರಸಾದ್ ಪರಿಶೀಲಿಸಿದರು. ಎಸಿಪಿ ಎನ್‌.ಡಿ.ಬಿರ್ಜೆ, ಡಿಸಿಪಿ ಸುಭಾಷ್ ಗುಡಿಮನಿ, ಆಹಾಯ ಮತ್ತು ನಾಗರಿಕ ಸರಬರಾಜು ಇಲಾಖೆ ಸಹಾಯಕ ನಿರ್ದೇಶಕ ಪ್ರಭಾಕರ ವಾಲಗದ ಚಿತ್ರದಲ್ಲಿದ್ದಾರೆ   

ಧಾರವಾಡ: ಇಲ್ಲಿಯ ಮಣಕಿಲ್ಲಾದ ಗೋದಾ­ಮಿನಲ್ಲಿ ಪಡಿತರ ಚೀಟಿದಾರರಿಗೆ ಪೂರೈಸಬೇಕಿದ್ದ ಗೋಧಿ ಹಾಗೂ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.

ಮಾಳಾಪುರದ ಜಾಫರ್ ಜೈಲಾನಿ ಅಮ್ಮಿನ­ಬಾವಿ ಬಂಧಿತ. ಈತ ಸೂಪರ್ ಮಾರ್ಕೆಟ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ಇತ್ತೀಚೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸೇರಿದ 13 ಚೀಲ ಗೋದಿ, 4 ಚೀಲ ಅಕ್ಕಿಯನ್ನು ಜಾಫರ್, ತನ್ನ ಮಣಕಿಲ್ಲಾದ ಗೋದಾಮಿನಲ್ಲಿ ದಾಸ್ತಾನು ಮಾಡಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದ ಪೊಲೀಸರು, 17 ಕ್ವಿಂಟಾಲ್‌ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ.

ಎಸಿಪಿ ಎಚ್.ಎಸ್.ಕೇರಿ ಅವರ ಮಾರ್ಗ­ದರ್ಶನದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಬಸವೇಶ್ವರ ಹೀರಾ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಇನ್‌ಸ್ಪೆಕ್ಟರ್‌ ಶೇಖರಪ್ಪ ಹಾಗೂ ಸಿಬ್ಬಂದಿ ಇದ್ದರು.

ಅಮರಗೋಳದಲ್ಲೂ ಪರಿಶೀಲನೆ
ಹುಬ್ಬಳ್ಳಿ: ಇಲ್ಲಿನ ಬಂಕಾಪುರ ಚೌಕದ ಗೋದಾ­ಮಿನಲ್ಲಿ ಪಡಿತರ ಅಕ್ಕಿ ವಶಪಡಿಸಿಕೊಂಡ ಪ್ರಕರಣಕ್ಕೆ ಪೂರಕವಾಗಿ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿರುವ ಉಗ್ರಾಣವೊಂದರ ಮೇಲೆ ಎಸಿಪಿ ಯಶೋದಾ ಒಂಟಗೋಡಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.

ಬಂಕಾಪುರ ಚೌಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಎಪಿಎಂಸಿ ಪ್ರಾಂಗಣದ ಆ ಉಗ್ರಾಣದಿಂದ ಖರೀದಿಸಲಾಗಿತ್ತು ಎಂಬ ಮಾಹಿತಿಯ ಹಿನ್ನೆಲೆಯಲ್ಲಿದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಪಡಿತರ ಅಕ್ಕಿ ಸೇರಿದಂತೆ ಯಾವುದೇ ಧಾನ್ಯಗಳ ಅಕ್ರಮ ದಾಸ್ತಾನು ಕಂಡುಬರಲಿಲ್ಲ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.