ADVERTISEMENT

ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2017, 6:45 IST
Last Updated 14 ಅಕ್ಟೋಬರ್ 2017, 6:45 IST

ಧಾರವಾಡ: ಇಲ್ಲಿನ ಅಕ್ಕಿಪೇಟೆ ಮತ್ತು ಗಾಂಧಿಚೌಕ್ ಬಳಿ ಪಾದಾಚಾರಿ ರಸ್ತೆಯಲ್ಲಿ ಅನಧಿಕೃತವಾಗಿದ್ದ ಅಂಗಡಿಗಳನ್ನು ಪಾಲಿಕೆಯ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ತೆರವುಗೊಳಿಸಿದರು.

30ಕ್ಕಿಂತಲೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಯಿತು. ಈ ಕುರಿತು ಸಾರ್ವಜನಿಕರು ದೂರು ನೀಡಿದ್ದರು. ತೆರವುಗೊಳಿಸುವಂತೆ ಸೂಚಿಸಿದ್ದರೂ ಪಾಲಿಸದ್ದರಿಂದ ಪೊಲೀಸ್‌ ಬಂದೋಬಸ್ತ್‌ನಲ್ಲಿ ತೆರವುಗೊಳಿಸಲಾಗಿದೆ ಎಂದು ಪಾಲಿಎಕ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT