ಧಾರವಾಡ: ನಗರದ ಮಾಳ ಮಡ್ಡಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಇತ್ತೀಚೆಗೆ `ಮಾದರಿ ವಿದ್ಯಾಭ್ಯಾಸ ಸಾಲ ಯೋಜನೆಯ~ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿತ್ತು.ಹುಬ್ಬಳ್ಳಿ ವೃತ್ತ ಕಚೇರಿಯ ಉಪ ಮಹಾಪ್ರಬಂಧಕ ಎ.ಎಂ.ಸುಧಾಕರ ಕಾರ್ಯಕ್ರಮ ಉದ್ಘಾಟಿಸಿ, ಕೆನರಾ ಬ್ಯಾಂಕ್ ಪ್ರಸ್ತುತಪಡಿಸಿದ ಈ ಹೊಸ ಮಾದರಿ ವಿದ್ಯಾಭ್ಯಾಸ ಸಾಲ ಯೋಜನೆಯ ಸದುಪ ಯೋಗ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಾಳಮಡ್ಡಿ ಶಾಖೆಯ ಪ್ರಧಾನ ವ್ಯವಸ್ಥಾಪಕ ಕೃಷ್ಣ ಕುಲಕರ್ಣಿ ಸ್ವಾಗತಿಸಿ, ಸಭೆಯ ಉದ್ದೇಶವನ್ನು ವಿವರಿಸಿದರು. ವಿದ್ಯಾಪೋಷಕ ಸಂಸ್ಥೆ ಯಿಂದ ನಡೆಸುತ್ತಿರುವ ಗ್ರಾಜ್ಯುಯೇಟ್ ಫಿನಿಶಿಂಗ್ ಸ್ಕೂಲ್ ವಿದ್ಯಾರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಖೆಯ ಅಧಿಕಾರಿ ರಾಜೀವ ದೀಕ್ಷಿತ್ ವಂದಿಸಿ ದರು.
ಆಟೊರಿಕ್ಷಾ ಚಾಲಕರ ಸಭೆ
ಧಾರವಾಡ: ಆಟೊರಿಕ್ಷಾ ಚಾಲಕರ ಹಾಗೂ ಮಾಲಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ 8ರಂದು ಮಧ್ಯಾಹ್ನ 3ಕ್ಕೆ ಇಲ್ಲಿನ ನಿವೃತ್ತ ನೌಕರರ ಭವನದಲ್ಲಿ ಆಟೊರಿಕ್ಷಾ ಚಾಲಕರ ಸಮಸ್ಯೆಗಳ ಕುರಿತ ಸಭೆಯನ್ನು ಕರೆಯಲಾಗಿದೆ. ಎಲ್ಲ ಪದಾಧಿಕಾರಿಗಳು ಹಾಗೂ ಮಾಲೀಕರು ಸಭೆಗೆ ಹಾಜರಾಗಬೇಕು ಎಂದು ಸಂಘದ ಅಧ್ಯಕ್ಷ ಜೀವನ ಹುತಕುರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.