ADVERTISEMENT

ದಿನೇಶ್ ಅಮಿನ್‌ಮಟ್ಟುಗೆ ಪಾಂಡೇಶ್ವರ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2012, 5:30 IST
Last Updated 20 ಫೆಬ್ರುವರಿ 2012, 5:30 IST

ಧಾರವಾಡ: ಇಲ್ಲಿನ ಅವನಿ ರಸಿಕರ ರಂಗ `ಪ್ರಜಾವಾಣಿ~ ಪತ್ರಿಕೆಯ ಸಹಾಯಕ ಸಂಪಾದಕ ದಿನೇಶ ಅಮಿನ್‌ಮಟ್ಟು ಅವರಿಗೆ ಪ್ರತಿಷ್ಠಿತ ಜಿ.ಆರ್.ಪಾಂಡೇಶ್ವರ ಶ್ರೇಷ್ಠ ಪತ್ರಕರ್ತ ಪ್ರಶಸ್ತಿ ಪ್ರಕಟಿಸಿದೆ.

ಪ್ರಶಸ್ತಿಯು 5000 ರೂ. ನಗದು ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಎ.ಸಿ.ಗೋಪಾಲ ಹಾಗೂ ಡಾ. ಎಂ.ಗಂಗಾಧರಪ್ಪ ಅವರನ್ನೊಳಗೊಂಡ ಡಾ. ಪಾಟೀಲ ಪುಟ್ಟಪ್ಪ ಅಧ್ಯಕ್ಷತೆಯ ಆಯ್ಕೆ ಸಮಿತಿ ಅಮಿನ್‌ಮಟ್ಟು ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.