ಧಾರವಾಡ: ಇಲ್ಲಿಯ ಭಾರತೀಯ ನೃತ್ಯ ಅಕಾ ಡೆಮಿಯ ವಿದ್ಯಾರ್ಥಿನಿ ನಿಧಿ ಶೆಟ್ಟಿಯ ರಂಗ ಪ್ರವೇಶ ಇದೇ 12 ರಂದು ಸಂಜೆ 5ಕ್ಕೆ ನಗರದ ಸೃಜನಾ ರಂಗ ಮಂದಿರದಲ್ಲಿ ನೆರವೇರಲಿದೆ.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ನಿಧಿಯ ನೃತ್ಯ ಗುರು ವಿದ್ವಾನ್ ರಾಜೇಂದ್ರ ಟೊಣಪಿ ಈ ಮಾಹಿತಿ ನೀಡಿದರು. ಪ್ರಸ್ತುತ ನಗರದ ಪ್ರಜಂಟೇಷನ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ನಿಧಿ, ಎಂಟನೇ ತರಗತಿಯಲ್ಲಿದ್ದಾಗಲೇ ವಿವಿಧ ಬಗೆಯ ನೃತ್ಯ ಪ್ರಕಾರಗಳಿಗೆ ನೃತ್ಯ ಸಂಯೋಜನೆ (ಕೊರಿಯೊಗ್ರಫಿ) ಮಾಡಿದ್ದಾಳೆ.
ರಂಗಪ್ರವೇಶ ಕಾರ್ಯಕ್ರಮವನ್ನು ಎಸ್ಡಿಎಂ ಶಿಕ್ಷಣ ಸೊಸೈಟಿ ಕಾರ್ಯದರ್ಶಿ ಜಿನೇಂದ್ರ ಪ್ರಸಾದ ಉದ್ಘಾಟಿಸುವರು. ಗೋಷ್ಠಿಯಲ್ಲಿ ನಿಧಿ ತಂದೆ ಉದಯ ಎಸ್.ಶೆಟ್ಟಿ. ಪಾಲಿಕೆ ಸದಸ್ಯ ವಿಜಯಾ ನಂದ ಶೆಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.