ADVERTISEMENT

ನೂತನ ಡಿಸಿಪಿ ಆಗಿ ರಮೇಶ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 5:48 IST
Last Updated 6 ಏಪ್ರಿಲ್ 2013, 5:48 IST

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್‌ನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಬಿ. ರಮೇಶ್ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.

ನವನಗರದಲ್ಲಿರುವ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಡಿಸಿಪಿ (ಅಪರಾಧ ಮತ್ತು ಸಂಚಾರ) ಶ್ರೀನಾಥ ಜೋಶಿ ಅವರು ರಮೇಶ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಈ ಹಿಂದೆ ಡಿಸಿಪಿ ಆಗಿದ್ದ ಎಸ್.ಎಂ.ಪ್ರತಾಪನ್ ಅವರು ಮಾರ್ಚ್ 31ರಂದು  ನಿವೃತ್ತಿಯಾಗಿದ್ದು, ತೆರವು ಆದ ಸ್ಥಾನಕ್ಕೆ ರಮೇಶ್ ನಿಯುಕ್ತಿಗೊಂಡಿದ್ದಾರೆ. 2009ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿರುವ ರಮೇಶ್, ಈ ಮೊದಲು ಚಿಂತಾಮಣಿಯಲ್ಲಿ ಉಪ ವಿಭಾಗದ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT