ಧಾರವಾಡ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಗೆ ಬರಬೇಕಾದ ಪಿಂಚಣಿ ಅನುದಾನ ₹ 140 ಕೋಟಿ ತಕ್ಷಣ ಬಿಡುಗಡೆ ಮಾಡುವಂತೆ ಮೇಯರ್ ಡಿ.ಕೆ.ಚವ್ಹಾಣ ಮತ್ತು ಉಪಮೇಯರ್ ಲಕ್ಷ್ಮಿಬಾಯಿ ಬಿಜವಾಡ ಮುಖ್ಯಮಂತ್ರಿಗಳನ್ನು ಒತ್ತಾಯಿಸಿ ಮನವಿ ಸಲ್ಲಿಸಿದರು.
ಸೋಮವಾರ ಅವಳಿನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ ಸಂದರ್ಭದಲ್ಲಿ ಮನವಿ ಸಲ್ಲಿಸಿ, ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಪಿಂಚಣಿ ಹಣ ಬಿಡುಗಡೆ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಇದುವರೆಗೂ ಹಣ ಬಿಡುಗಡೆಗೆ ಕ್ರಮ ಕೈಗೊಂಡಿಲ್ಲ.
ಪಾಲಿಕೆಯು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ಸರ್ಕಾರ ಹಣ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.