ADVERTISEMENT

ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 9:30 IST
Last Updated 27 ಡಿಸೆಂಬರ್ 2017, 9:30 IST

ಧಾರವಾಡ: ರೈತರ ಸಾಲ ಮನ್ನಾ, ಪ್ರಸಕ್ತ ಸಾಲಿನ ಹಿಂಗಾರು ಬೆಳೆ ಪರಿಹಾರ ಬಿಡುಗಡೆ, ಮಹದಾಯಿ, ಕಳಸಾ ಬಂಡೂರಿ ಯೇಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವಲಗುಂದ ತಾಲ್ಲೂಕಿನ ಶಿರೂರ ಗ್ರಾಮದ ರೈತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನ ಬಾಳಗೌಡರ ಮಾತನಾಡಿ, ‘ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ₹10 ಲಕ್ಷದ ವರೆಗೆ ಶೇ 1ರಷ್ಟು ಬಡ್ಡಿಯಲ್ಲಿ ಸಾಲ ಕೊಡುವ ಯೋಜನೆ ಜಾರಿಗೆ ತರಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಜಂಟಿಯಾಗಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಜತೆಗೆ ಕಳಸಾ ಬಂಡೂರಿ ಯೋಜನೆ ಅನುಷ್ಠಾನಗೊಳಿಸಿಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದರು.

ರಾಚಯ್ಯ ಹಿರೇಮಠ, ಮಡಿವಾಳಪ್ಪ ಹೊಸೂರ, ಬಸವಣ್ಣೆಪ್ಪ ಯರಗುಪ್ಪಿ, ಶಿವನಗೌಡ, ಮಲ್ಲಿಕಾರ್ಜುನ ಪಾಡಿಗೌಡರ, ಗುರುಸಿದ್ದ ಸುಂಕದ, ಶಂಭು ಶಿರೂರ, ದುಂಡಪ್ಪ ನಂದಿಗೋಲ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.