ಹುಬ್ಬಳ್ಳಿ: ಅವಳಿ ನಗರದಲ್ಲಿ ನೀರಿಗಾಗಿ ಜನರು ತೊಂದರೆ ಅನುಭವಿಸುತ್ತಿದ್ದರೂ, ಜಲಮಂಡಳಿ ಪಂಪ್ಹೌಸ್ನಲ್ಲಿ ಸಂಗ್ರಹಿಸಿದ ನೀರು ವ್ಯರ್ಥವಾಗಿ ರಸ್ತೆಯಲ್ಲಿ ಹರಿದಿದ್ದನ್ನು ಕಂಡ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
‘ಹತ್ತು ದಿನಕ್ಕೆ ಒಮ್ಮೆಯಾದರೂ ಜಲಮಂಡಳಿಯವರು ನೀರು ಪೂರೈಕೆ ಮಾಡುತ್ತಿಲ್ಲ. ಆದರೆ, ನವನಗರದ ಎಪಿಎಂಸಿ ಪೊಲೀಸ್ ಠಾಣೆ ಆವರಣದಲ್ಲಿರುವ ಪಂಪ್ಹೌಸ್ನಿಂದ ಸೋಮವಾರ ಅಪಾರ ಪ್ರಮಾಣದ ನೀರು ಹರಿದು ರಸ್ತೆಗೆ ಬಂದಿತು. ವ್ಯರ್ಥವಾಗಿ ಗಟಾರ ಸೇರಿತು. ಅರ್ಧ ಗಂಟೆಗೂ ಹೆಚ್ಚು ನೀರು ವ್ಯರ್ಥವಾಗಿ ಹರಿದರೂ, ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ’ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರು ಪೋಲಾಗಿದೆ ಎಂದು ನವನಗರದ ಪ್ರದೀಪ ದೇಸಾಯಿ ದೂರಿದರು.
ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಜಲಮಂಡಳಿ ಅಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.