ADVERTISEMENT

ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2011, 5:30 IST
Last Updated 24 ಸೆಪ್ಟೆಂಬರ್ 2011, 5:30 IST

ಧಾರವಾಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿಗೆ ಸುಸಜ್ಜಿತ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸಬೇಕು ಎಂದು ಆಗ್ರ ಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ (ಎಐಡಿ ಎಸ್‌ಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ನೇತೃತ್ವದಲ್ಲಿ ವಿದ್ಯಾರ್ಥಿ ಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ಅವಶ್ಯಕ ಕೊಠಡಿಗಳು, ಶೌಚಾಲಯ, ಸುಸಜ್ಜಿತ ಗ್ರಂಥಾಲಯ, ಪ್ರಯೋಗಾ ಲಯದ ಸೌಲಭ್ಯ ಒದಗಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನ ಕೂಡಲೇ ಬಿಡುಗಡೆ ಮಾಡ ಬೇಕು. ಸ್ವಂತ ಕಟ್ಟಡ ನಿರ್ಮಾಣ ವಾಗುವವರೆಗೆ ಸುಸಜ್ಜಿತ ಕಟ್ಟಡವನ್ನು ಬಾಡಿಗೆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸ ಲಾಗಿದೆ.

ಕಾಲೇಜು ಆರಂಭವಾಗಿ ಐದು ವರ್ಷ ಗಳಾದರೂ ಸಹ ಇಲ್ಲಿಯವರೆಗೆ ಯಾವುದೇ ಸೌಕರ್ಯ ಒದಗಿಸಿಲ್ಲ. ಕೊಠಡಿಗಳಲ್ಲಿದೆ ಮೈದಾನದಲ್ಲಿ ಪಾಠ ಕೇಳುವ ಪರಿಸ್ಥಿತಿ ಇದೆ. ಈಗಿರುವ ಕಟ್ಟಡ ದಲ್ಲಿ ಸರಿಯಾದ ಶೈಕ್ಷಣಿಕ ವಾತಾವರಣ ಇಲ್ಲ. ಕೊಳಚೆ ಪ್ರದೇಶದಂತಿರುವ ಈಗಿನ ಆವರಣದಲ್ಲಿ ಕಾಲೇಜು ಮುಂದುವ ರಿಸಬಾರದು.

1300 ವಿದ್ಯಾರ್ಥಿ ಗಳಿದ್ದರೂ ಸರಿಯಾದ ಸೌಕರ್ಯ ಒದ ಗಿಸಿಲ್ಲ ಎಂದು ಮನವಿಯಲ್ಲಿ ಆಪಾ ದಿಸಲಾಗಿದೆ.
ಕಲಾಭವನದಿಂದ ಪ್ರತಿಭಟನಾ ರ‌್ಯಾಲಿ ಮೂಲಕ ಜಿಲ್ಲಾಧಿಕಾರಿ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಗೆ ತೆರಳಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಗಂಗಾಧರ ಬಡಿಗೇರ, ಲಕ್ಷ್ಮಣ ಜಡಗನ್ನ ವರ, ಶರಣ ಬಸವ, ನಾಗರಾಜ ತಳು ಗೇರಿ, ರಾಜಶೇಖರ, ಪ್ರವೀಣ, ಕವಿತಾ, ನಂದಿನಿ, ಮಲ್ಲಿಕಾರ್ಜುನ ಮತ್ತಿತರರು ಪ್ರತಿಭಟನೆ ನೇತೃತ್ವದ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.