ಹುಬ್ಬಳ್ಳಿ: ರಾಜ್ಯ ಗುಪ್ತಚರ ಇಲಾಖೆಯಲ್ಲಿ ಡಿವೈಎಸ್ಪಿ ಆಗಿದ್ದ ಎ.ಆರ್. ಬಡಿಗೇರ ಅವರನ್ನು ಹುಬ್ಬಳ್ಳಿ ಉತ್ತರ ವಿಭಾಗದ ಎಸಿಪಿಯಾಗಿ ನೇಮಕ ಮಾಡಲಾಗಿದೆ.
ಉತ್ತರ ವಿಭಾಗದಲ್ಲೇ ಬಹಳ ವರ್ಷಗಳ ಕಾಲ ಕಾರ್ಯ ನಿರ್ವಹಿಸಿರುವ ಬಡಿಗೇರ ಅವರಿಗೆ ಈ ಪ್ರದೇಶದ ಎಲ್ಲ `ಒಳ-ಹೊರ~ಗಳು ಚೆನ್ನಾಗಿ ಗೊತ್ತು ಎಂಬ ಮಾತು ಪೊಲೀಸ್ ವಲಯದಲ್ಲಿ ಚಾಲ್ತಿಯಲ್ಲಿದೆ.
ಇದುವರೆಗೆ ಆ ಸ್ಥಾನದಲ್ಲಿದ್ದ ಎನ್.ಎಸ್. ಪಾಟೀಲ ಅವರನ್ನು ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಉಳಿದಂತೆ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.