ಹುಬ್ಬಳ್ಳಿ: ‘ಪ್ರಜಾವಾಣಿ’ ಹಾಗೂ ಸಿಡಿಎಸ್ಎಲ್, ಮುಂಬೈ ಷೇರು ವಿನಿಮಯ ಕೇಂದ್ರ, ಐಸಿಐಸಿಐ ಸೆಕ್ಯೂರಿಟಿಸ್, ಬಿಒ ಪ್ರೊಟೆಕ್ಷನ್ ಫಂಡ್ ಸಂಸ್ಥೆಗಳ ಸಹಯೋಗದಲ್ಲಿ ಹೂಡಿಕೆದಾರರ ಸಮಾವೇಶವು ಇದೇ 22ರಂದು ಸಂಜೆ 4.30ಕ್ಕೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸಭಾಂಗಣದಲ್ಲಿ ನಡೆಯಲಿದೆ.
ಷೇರು ಮಾರುಕಟ್ಟೆಯ ವಿವಿಧ ವಿಚಾರಗಳ ಬಗ್ಗೆ ಹಾಗೂ ಹೂಡಿಕೆಯ ಸಂದರ್ಭ ವಹಿಸಬೇಕಾದ ಎಚ್ಚರಿಕೆ ಬಗ್ಗೆ ಆಯಾ ಕ್ಷೇತ್ರದ ತಜ್ಞರು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಯಾದ ರಾಜೀವ್ ಗಾಂಧಿ ಈಕ್ವಿಟಿ ಉಳಿತಾಯ ಯೋಜನೆ (ಆರ್ಜಿಇಎಸ್ಎಸ್) ಹಾಗೂ ಷೇರು ಮಾರುಕಟ್ಟೆಯಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಕಾರ್ಯಕ್ರಮದಲ್ಲಿ ಹೆಚ್ಚಿನ ಮಾಹಿತಿ ದೊರೆಯಲಿದೆ.
ಮುಂಬೈ ಷೇರು ವಿನಿಮಯ ಕೇಂದ್ರದ ವ್ಯವಸ್ಥಾಪಕ ಬದರಿ ನಾರಾಯಣ್, ಐಸಿಐಸಿಐ ಸೆಕ್ಯೂರಿಟಿಸ್ನ ಪ್ರಾದೇಶಿಕ ವ್ಯವಸ್ಥಾಪಕ ಅಭಿಷೇಕ್ ದೇಶಪಾಂಡೆ, ಕಂಪೆನಿಯ ತರಬೇತುದಾರ ಮಂಜುನಾಥ್ ಶಿಗ್ಗಾವ್ ಹಾಗೂ ಸಿಎಸ್ಡಿಎಸ್ನ ಬೆಂಗಳೂರು ವಿಭಾಗದ ಪ್ರಾದೇಶಿಕ ವ್ಯವಸ್ಥಾಪಕ ಸಿ.ಎಸ್. ಹರೀಶ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ. ಷೇರು ಮಾರುಕಟ್ಟೆ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಹೂಡಿಕೆಯಲ್ಲಿ ತೊಡಗಿಸಿಕೊಳ್ಳಲು ಇಚ್ಛಿಸುವವರು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 0836–2372081 ಇಲ್ಲವೇ ಮೊಬೈಲ್ 94496–73067 ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.